ಸುದ್ದಿಗಳು

#ShaktiYojane |ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ `ಶಕ್ತಿ` | ಕೋಟಿ ಕೋಟಿ ಕಾಣಿಕೆ ಸಂಗ್ರಹ ಕಂಡ ದೇವಾಲಯಗಳು…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸರ್ಕಾರದ ಕೆಲವೊಂದು ಯೋಜನೆಗಳು ಫಲಾನುಭವಿಗಳಿಗೆ ಮಾತ್ರ ಪ್ರಯೋಜನವಾಗದೆ ಇನ್ನಿತರ ಮೂಲಗಳಿಗೂ ಸಹಾಯವಾಗುತ್ತದೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆ ಬಗ್ಗೆ ಬೇರೆ ಯಾವುದೇ ಅಸಮಾಧಾನ ಇದ್ದರೂ ಪುಣ್ಯ ಕ್ಷೇತ್ರಗಳಿಗೆ ಇದರಿಂದ ಲಾಭವೇ ಆಗಿದೆ. ಅಷ್ಟೇ ಅಲ್ಲದೆ ದೇವಾಲಯಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೂ ತಕ್ಕ ಮಟ್ಟಿನ ಲಾಭ ತಂದಿದೆ ಎಂದೇ ಹೇಳಬಹುದು.

Advertisement
Advertisement

ಶಕ್ತಿ ಯೋಜನೆಯಿಂದ #Shakti Scheme ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ರಾಜ್ಯಾದ್ಯಂತ ದೇಗುಲಗಳಿಗೆ ನಾರಿಮಣಿಯರು ದಾಂಗುಡಿ ಇಡುತ್ತಿದ್ದಾರೆ. ವಾರಾಂತ್ಯಗಳಲ್ಲಂತು ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜೊತೆಗೆ ಕಾಣಿಕೆಗಳನ್ನೂ ಅರ್ಪಿಸುತ್ತಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಿವೆ.

ಕಳೆದ ಒಂದು ತಿಂಗಳಲ್ಲಿ 58 ದೇಗುಲಗಳ ಹುಂಡಿಯಲ್ಲಿ 25 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ 11ರ ವರೆಗೆ ಪ್ರತಿಷ್ಠಿತ 58 ದೇಗುಲಗಳಲ್ಲಿ ಇ-ಹುಂಡಿ ಮೂಲಕ 19 ಕೋಟಿ ಆದಾಯ ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಆದಾಯದಲ್ಲಿ ಭಾರೀ ಏರಿಕೆ ಕಂಡಿದೆ. ಮ್ಯಾನ್ಯುಯಲ್ ಹುಂಡಿಗಳನ್ನ ತೆರೆದರೆ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಲಿದೆ ಎನ್ನಲಾಗಿದೆ.

ಯಾವ ದೇವಾಲಯಗಳಿಗೆ ಎಷ್ಟು ಆದಾಯ? : 2022ರ ಜೂನ್ 11 ರಿಂದ ಜುಲೈ 15ರ ವರೆಗೆ ಹೋಲಿಕೆ ಮಾಡಿದ್ರೆ 2023 ಜೂನ್ 11 ರಿಂದ ಜುಲೈ 15ರ ವರೆಗೆ ದೇವಸ್ಥಾನಗಳ ಆದಾಯದಲ್ಲಿ ಹೆಚ್ಚಳವಾಗಿರುವುದು ಕಂಡುಬಂದಿದೆ.

ಕುಕ್ಕೆ ಸುಬ್ರಮಣ್ಯ ದೇವಾಲಯ
ಕಳೆದ ವರ್ಷ – 11.13 ಕೋಟಿ ರೂ.
ಈ ವರ್ಷ – 11.16 ಕೋಟಿ ರೂ.

ಮೈಸೂರಿನ ಚಾಮುಂಡೇಶ್ವರಿ
ಕಳೆದ ವರ್ಷ – 48.01 ಲಕ್ಷ ರೂ.
ಈ ವರ್ಷ – 3.63 ಕೋಟಿ ರೂ.

Advertisement

ಯಡಿಯೂರು ಸಿದ್ದಲಿಂಗೇಶ್ವರ
ಕಳೆದ ವರ್ಷ – 1.20 ಕೋಟಿ ರೂ.
ಈ ವರ್ಷ – 1.48 ಕೋಟಿ ರೂ.

ನಂಜನಗೂಡು ಶ್ರೀಕಂಠೇಶ್ವರ
ಕಳೆದ ವರ್ಷ – 1.05 ಕೋಟಿ ರೂ.
ಈ ವರ್ಷ – 1.27 ಕೋಟಿ ರೂ.

ಕೊಪ್ಪಳ ಜಿಲ್ಲೆ ಹುಲಿಗೆಮ್ಮದೇವಿ
ಕಳೆದ ವರ್ಷ – 1.02 ಕೋಟಿ ರೂ.
ಈ ವರ್ಷ – 1.41 ಕೋಟಿ ರೂ.

ಬೆಂಗಳೂರು ಬನಶಂಕರಿ
ಕಳೆದ ವರ್ಷ – 65.82 ಲಕ್ಷ ರೂ.
ಈ ವರ್ಷ – 83.64 ಲಕ್ಷ ರೂ.

ದ.ಕನ್ನಡ ಮಹಾಲಿಂಗೇಶ್ವರ
ಕಳೆದ ವರ್ಷ – 43.33 ಲಕ್ಷ ರೂ.
ಈ ವರ್ಷ – 48.09 ಲಕ್ಷ ರೂ.

Advertisement
ಶ್ರೀರಂಗಪಟ್ಟಣ ನಿಮಿಷಾಂಬ ದೇವಾಲಯ

ಕಳೆದ ವರ್ಷ – 20.76 ಲಕ್ಷ ರೂ.
ಈ ವರ್ಷ – 27.98 ಲಕ್ಷ ರೂ.

ಕನಕಪುರದ ಕಬ್ಬಾಳಮ್ಮ
ಕಳೆದ ವರ್ಷ – 13.96 ಲಕ್ಷ ರೂ.
ಈ ವರ್ಷ – 19.64 ಲಕ್ಷ ರೂ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |

ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್‌  ಉತ್ಪನ್ನಗಳ ತಯಾರಿಕಾ ಕಂಪನಿ "ಬ್ರಿವೆರಾ"ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ,…

5 hours ago

ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ

ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ…

5 hours ago

ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?

ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ …

5 hours ago

ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |

ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ  ಜುಲೈ 22 ರಂದು ಮಾವಿನಹಣ್ಣಿನ…

6 hours ago

ಜನನ-ಮರಣ 21 ದಿನಗಳೊಳಗೆ  ನೋಂದಣಿ ಕಡ್ಡಾಯ – ದ ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ

ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/…

6 hours ago

ಸಸ್ಯ ಪರಿಚಯ – ಕಿರಾತಕಡ್ಡಿ | ಮನೆಯಲ್ಲಿರಬೇಕಾದ ಗಿಡಗಳಲ್ಲಿ ಇದೂ ಒಂದು |

ಈ ಗಿಡದ ಸಸ್ಯ ಶಾಸ್ತ್ರೀಯ ಹೆಸರು Andrographis Paniculata. ಕಿರಾತಕಡ್ಡಿಗೆ ನೆಲಬೇವು ಎಂಬ…

13 hours ago