ಸರ್ಕಾರದ ಕೆಲವೊಂದು ಯೋಜನೆಗಳು ಫಲಾನುಭವಿಗಳಿಗೆ ಮಾತ್ರ ಪ್ರಯೋಜನವಾಗದೆ ಇನ್ನಿತರ ಮೂಲಗಳಿಗೂ ಸಹಾಯವಾಗುತ್ತದೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆ ಬಗ್ಗೆ ಬೇರೆ ಯಾವುದೇ ಅಸಮಾಧಾನ ಇದ್ದರೂ ಪುಣ್ಯ ಕ್ಷೇತ್ರಗಳಿಗೆ ಇದರಿಂದ ಲಾಭವೇ ಆಗಿದೆ. ಅಷ್ಟೇ ಅಲ್ಲದೆ ದೇವಾಲಯಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೂ ತಕ್ಕ ಮಟ್ಟಿನ ಲಾಭ ತಂದಿದೆ ಎಂದೇ ಹೇಳಬಹುದು.
ಶಕ್ತಿ ಯೋಜನೆಯಿಂದ #Shakti Scheme ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ರಾಜ್ಯಾದ್ಯಂತ ದೇಗುಲಗಳಿಗೆ ನಾರಿಮಣಿಯರು ದಾಂಗುಡಿ ಇಡುತ್ತಿದ್ದಾರೆ. ವಾರಾಂತ್ಯಗಳಲ್ಲಂತು ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜೊತೆಗೆ ಕಾಣಿಕೆಗಳನ್ನೂ ಅರ್ಪಿಸುತ್ತಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಿವೆ.
ಯಾವ ದೇವಾಲಯಗಳಿಗೆ ಎಷ್ಟು ಆದಾಯ? : 2022ರ ಜೂನ್ 11 ರಿಂದ ಜುಲೈ 15ರ ವರೆಗೆ ಹೋಲಿಕೆ ಮಾಡಿದ್ರೆ 2023 ಜೂನ್ 11 ರಿಂದ ಜುಲೈ 15ರ ವರೆಗೆ ದೇವಸ್ಥಾನಗಳ ಆದಾಯದಲ್ಲಿ ಹೆಚ್ಚಳವಾಗಿರುವುದು ಕಂಡುಬಂದಿದೆ.
ಕುಕ್ಕೆ ಸುಬ್ರಮಣ್ಯ ದೇವಾಲಯ
ಕಳೆದ ವರ್ಷ – 11.13 ಕೋಟಿ ರೂ.
ಈ ವರ್ಷ – 11.16 ಕೋಟಿ ರೂ.
ಮೈಸೂರಿನ ಚಾಮುಂಡೇಶ್ವರಿ
ಕಳೆದ ವರ್ಷ – 48.01 ಲಕ್ಷ ರೂ.
ಈ ವರ್ಷ – 3.63 ಕೋಟಿ ರೂ.
ಯಡಿಯೂರು ಸಿದ್ದಲಿಂಗೇಶ್ವರ
ಕಳೆದ ವರ್ಷ – 1.20 ಕೋಟಿ ರೂ.
ಈ ವರ್ಷ – 1.48 ಕೋಟಿ ರೂ.
ನಂಜನಗೂಡು ಶ್ರೀಕಂಠೇಶ್ವರ
ಕಳೆದ ವರ್ಷ – 1.05 ಕೋಟಿ ರೂ.
ಈ ವರ್ಷ – 1.27 ಕೋಟಿ ರೂ.
ಕೊಪ್ಪಳ ಜಿಲ್ಲೆ ಹುಲಿಗೆಮ್ಮದೇವಿ
ಕಳೆದ ವರ್ಷ – 1.02 ಕೋಟಿ ರೂ.
ಈ ವರ್ಷ – 1.41 ಕೋಟಿ ರೂ.
ಬೆಂಗಳೂರು ಬನಶಂಕರಿ
ಕಳೆದ ವರ್ಷ – 65.82 ಲಕ್ಷ ರೂ.
ಈ ವರ್ಷ – 83.64 ಲಕ್ಷ ರೂ.
ದ.ಕನ್ನಡ ಮಹಾಲಿಂಗೇಶ್ವರ
ಕಳೆದ ವರ್ಷ – 43.33 ಲಕ್ಷ ರೂ.
ಈ ವರ್ಷ – 48.09 ಲಕ್ಷ ರೂ.
ಕಳೆದ ವರ್ಷ – 20.76 ಲಕ್ಷ ರೂ.
ಈ ವರ್ಷ – 27.98 ಲಕ್ಷ ರೂ.
ಕನಕಪುರದ ಕಬ್ಬಾಳಮ್ಮ
ಕಳೆದ ವರ್ಷ – 13.96 ಲಕ್ಷ ರೂ.
ಈ ವರ್ಷ – 19.64 ಲಕ್ಷ ರೂ.
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…
ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು…
ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…