Advertisement
ಸುದ್ದಿಗಳು

#ShaktiYojane |ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ `ಶಕ್ತಿ` | ಕೋಟಿ ಕೋಟಿ ಕಾಣಿಕೆ ಸಂಗ್ರಹ ಕಂಡ ದೇವಾಲಯಗಳು…!

Share

ಸರ್ಕಾರದ ಕೆಲವೊಂದು ಯೋಜನೆಗಳು ಫಲಾನುಭವಿಗಳಿಗೆ ಮಾತ್ರ ಪ್ರಯೋಜನವಾಗದೆ ಇನ್ನಿತರ ಮೂಲಗಳಿಗೂ ಸಹಾಯವಾಗುತ್ತದೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆ ಬಗ್ಗೆ ಬೇರೆ ಯಾವುದೇ ಅಸಮಾಧಾನ ಇದ್ದರೂ ಪುಣ್ಯ ಕ್ಷೇತ್ರಗಳಿಗೆ ಇದರಿಂದ ಲಾಭವೇ ಆಗಿದೆ. ಅಷ್ಟೇ ಅಲ್ಲದೆ ದೇವಾಲಯಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೂ ತಕ್ಕ ಮಟ್ಟಿನ ಲಾಭ ತಂದಿದೆ ಎಂದೇ ಹೇಳಬಹುದು.

Advertisement
Advertisement

ಶಕ್ತಿ ಯೋಜನೆಯಿಂದ #Shakti Scheme ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ರಾಜ್ಯಾದ್ಯಂತ ದೇಗುಲಗಳಿಗೆ ನಾರಿಮಣಿಯರು ದಾಂಗುಡಿ ಇಡುತ್ತಿದ್ದಾರೆ. ವಾರಾಂತ್ಯಗಳಲ್ಲಂತು ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜೊತೆಗೆ ಕಾಣಿಕೆಗಳನ್ನೂ ಅರ್ಪಿಸುತ್ತಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಿವೆ.

ಕಳೆದ ಒಂದು ತಿಂಗಳಲ್ಲಿ 58 ದೇಗುಲಗಳ ಹುಂಡಿಯಲ್ಲಿ 25 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ 11ರ ವರೆಗೆ ಪ್ರತಿಷ್ಠಿತ 58 ದೇಗುಲಗಳಲ್ಲಿ ಇ-ಹುಂಡಿ ಮೂಲಕ 19 ಕೋಟಿ ಆದಾಯ ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಆದಾಯದಲ್ಲಿ ಭಾರೀ ಏರಿಕೆ ಕಂಡಿದೆ. ಮ್ಯಾನ್ಯುಯಲ್ ಹುಂಡಿಗಳನ್ನ ತೆರೆದರೆ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಲಿದೆ ಎನ್ನಲಾಗಿದೆ.

ಯಾವ ದೇವಾಲಯಗಳಿಗೆ ಎಷ್ಟು ಆದಾಯ? : 2022ರ ಜೂನ್ 11 ರಿಂದ ಜುಲೈ 15ರ ವರೆಗೆ ಹೋಲಿಕೆ ಮಾಡಿದ್ರೆ 2023 ಜೂನ್ 11 ರಿಂದ ಜುಲೈ 15ರ ವರೆಗೆ ದೇವಸ್ಥಾನಗಳ ಆದಾಯದಲ್ಲಿ ಹೆಚ್ಚಳವಾಗಿರುವುದು ಕಂಡುಬಂದಿದೆ.

ಕುಕ್ಕೆ ಸುಬ್ರಮಣ್ಯ ದೇವಾಲಯ
ಕಳೆದ ವರ್ಷ – 11.13 ಕೋಟಿ ರೂ.
ಈ ವರ್ಷ – 11.16 ಕೋಟಿ ರೂ.

ಮೈಸೂರಿನ ಚಾಮುಂಡೇಶ್ವರಿ
ಕಳೆದ ವರ್ಷ – 48.01 ಲಕ್ಷ ರೂ.
ಈ ವರ್ಷ – 3.63 ಕೋಟಿ ರೂ.

ಯಡಿಯೂರು ಸಿದ್ದಲಿಂಗೇಶ್ವರ
ಕಳೆದ ವರ್ಷ – 1.20 ಕೋಟಿ ರೂ.
ಈ ವರ್ಷ – 1.48 ಕೋಟಿ ರೂ.

ನಂಜನಗೂಡು ಶ್ರೀಕಂಠೇಶ್ವರ
ಕಳೆದ ವರ್ಷ – 1.05 ಕೋಟಿ ರೂ.
ಈ ವರ್ಷ – 1.27 ಕೋಟಿ ರೂ.

ಕೊಪ್ಪಳ ಜಿಲ್ಲೆ ಹುಲಿಗೆಮ್ಮದೇವಿ
ಕಳೆದ ವರ್ಷ – 1.02 ಕೋಟಿ ರೂ.
ಈ ವರ್ಷ – 1.41 ಕೋಟಿ ರೂ.

ಬೆಂಗಳೂರು ಬನಶಂಕರಿ
ಕಳೆದ ವರ್ಷ – 65.82 ಲಕ್ಷ ರೂ.
ಈ ವರ್ಷ – 83.64 ಲಕ್ಷ ರೂ.

ದ.ಕನ್ನಡ ಮಹಾಲಿಂಗೇಶ್ವರ
ಕಳೆದ ವರ್ಷ – 43.33 ಲಕ್ಷ ರೂ.
ಈ ವರ್ಷ – 48.09 ಲಕ್ಷ ರೂ.

ಶ್ರೀರಂಗಪಟ್ಟಣ ನಿಮಿಷಾಂಬ ದೇವಾಲಯ

ಕಳೆದ ವರ್ಷ – 20.76 ಲಕ್ಷ ರೂ.
ಈ ವರ್ಷ – 27.98 ಲಕ್ಷ ರೂ.

ಕನಕಪುರದ ಕಬ್ಬಾಳಮ್ಮ
ಕಳೆದ ವರ್ಷ – 13.96 ಲಕ್ಷ ರೂ.
ಈ ವರ್ಷ – 19.64 ಲಕ್ಷ ರೂ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

20 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

21 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

21 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

21 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

22 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

22 hours ago