ಸರ್ಕಾರದ ಕೆಲವೊಂದು ಯೋಜನೆಗಳು ಫಲಾನುಭವಿಗಳಿಗೆ ಮಾತ್ರ ಪ್ರಯೋಜನವಾಗದೆ ಇನ್ನಿತರ ಮೂಲಗಳಿಗೂ ಸಹಾಯವಾಗುತ್ತದೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆ ಬಗ್ಗೆ ಬೇರೆ ಯಾವುದೇ ಅಸಮಾಧಾನ ಇದ್ದರೂ ಪುಣ್ಯ ಕ್ಷೇತ್ರಗಳಿಗೆ ಇದರಿಂದ ಲಾಭವೇ ಆಗಿದೆ. ಅಷ್ಟೇ ಅಲ್ಲದೆ ದೇವಾಲಯಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೂ ತಕ್ಕ ಮಟ್ಟಿನ ಲಾಭ ತಂದಿದೆ ಎಂದೇ ಹೇಳಬಹುದು.
ಶಕ್ತಿ ಯೋಜನೆಯಿಂದ #Shakti Scheme ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ರಾಜ್ಯಾದ್ಯಂತ ದೇಗುಲಗಳಿಗೆ ನಾರಿಮಣಿಯರು ದಾಂಗುಡಿ ಇಡುತ್ತಿದ್ದಾರೆ. ವಾರಾಂತ್ಯಗಳಲ್ಲಂತು ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜೊತೆಗೆ ಕಾಣಿಕೆಗಳನ್ನೂ ಅರ್ಪಿಸುತ್ತಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಿವೆ.
ಯಾವ ದೇವಾಲಯಗಳಿಗೆ ಎಷ್ಟು ಆದಾಯ? : 2022ರ ಜೂನ್ 11 ರಿಂದ ಜುಲೈ 15ರ ವರೆಗೆ ಹೋಲಿಕೆ ಮಾಡಿದ್ರೆ 2023 ಜೂನ್ 11 ರಿಂದ ಜುಲೈ 15ರ ವರೆಗೆ ದೇವಸ್ಥಾನಗಳ ಆದಾಯದಲ್ಲಿ ಹೆಚ್ಚಳವಾಗಿರುವುದು ಕಂಡುಬಂದಿದೆ.
ಕುಕ್ಕೆ ಸುಬ್ರಮಣ್ಯ ದೇವಾಲಯ
ಕಳೆದ ವರ್ಷ – 11.13 ಕೋಟಿ ರೂ.
ಈ ವರ್ಷ – 11.16 ಕೋಟಿ ರೂ.
ಮೈಸೂರಿನ ಚಾಮುಂಡೇಶ್ವರಿ
ಕಳೆದ ವರ್ಷ – 48.01 ಲಕ್ಷ ರೂ.
ಈ ವರ್ಷ – 3.63 ಕೋಟಿ ರೂ.
ಯಡಿಯೂರು ಸಿದ್ದಲಿಂಗೇಶ್ವರ
ಕಳೆದ ವರ್ಷ – 1.20 ಕೋಟಿ ರೂ.
ಈ ವರ್ಷ – 1.48 ಕೋಟಿ ರೂ.
ನಂಜನಗೂಡು ಶ್ರೀಕಂಠೇಶ್ವರ
ಕಳೆದ ವರ್ಷ – 1.05 ಕೋಟಿ ರೂ.
ಈ ವರ್ಷ – 1.27 ಕೋಟಿ ರೂ.
ಕೊಪ್ಪಳ ಜಿಲ್ಲೆ ಹುಲಿಗೆಮ್ಮದೇವಿ
ಕಳೆದ ವರ್ಷ – 1.02 ಕೋಟಿ ರೂ.
ಈ ವರ್ಷ – 1.41 ಕೋಟಿ ರೂ.
ಬೆಂಗಳೂರು ಬನಶಂಕರಿ
ಕಳೆದ ವರ್ಷ – 65.82 ಲಕ್ಷ ರೂ.
ಈ ವರ್ಷ – 83.64 ಲಕ್ಷ ರೂ.
ದ.ಕನ್ನಡ ಮಹಾಲಿಂಗೇಶ್ವರ
ಕಳೆದ ವರ್ಷ – 43.33 ಲಕ್ಷ ರೂ.
ಈ ವರ್ಷ – 48.09 ಲಕ್ಷ ರೂ.
ಕಳೆದ ವರ್ಷ – 20.76 ಲಕ್ಷ ರೂ.
ಈ ವರ್ಷ – 27.98 ಲಕ್ಷ ರೂ.
ಕನಕಪುರದ ಕಬ್ಬಾಳಮ್ಮ
ಕಳೆದ ವರ್ಷ – 13.96 ಲಕ್ಷ ರೂ.
ಈ ವರ್ಷ – 19.64 ಲಕ್ಷ ರೂ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…