Advertisement
ಸುದ್ದಿಗಳು

#ShaktiYojane |ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ `ಶಕ್ತಿ` | ಕೋಟಿ ಕೋಟಿ ಕಾಣಿಕೆ ಸಂಗ್ರಹ ಕಂಡ ದೇವಾಲಯಗಳು…!

Share

ಸರ್ಕಾರದ ಕೆಲವೊಂದು ಯೋಜನೆಗಳು ಫಲಾನುಭವಿಗಳಿಗೆ ಮಾತ್ರ ಪ್ರಯೋಜನವಾಗದೆ ಇನ್ನಿತರ ಮೂಲಗಳಿಗೂ ಸಹಾಯವಾಗುತ್ತದೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆ ಬಗ್ಗೆ ಬೇರೆ ಯಾವುದೇ ಅಸಮಾಧಾನ ಇದ್ದರೂ ಪುಣ್ಯ ಕ್ಷೇತ್ರಗಳಿಗೆ ಇದರಿಂದ ಲಾಭವೇ ಆಗಿದೆ. ಅಷ್ಟೇ ಅಲ್ಲದೆ ದೇವಾಲಯಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೂ ತಕ್ಕ ಮಟ್ಟಿನ ಲಾಭ ತಂದಿದೆ ಎಂದೇ ಹೇಳಬಹುದು.

ಶಕ್ತಿ ಯೋಜನೆಯಿಂದ #Shakti Scheme ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ರಾಜ್ಯಾದ್ಯಂತ ದೇಗುಲಗಳಿಗೆ ನಾರಿಮಣಿಯರು ದಾಂಗುಡಿ ಇಡುತ್ತಿದ್ದಾರೆ. ವಾರಾಂತ್ಯಗಳಲ್ಲಂತು ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜೊತೆಗೆ ಕಾಣಿಕೆಗಳನ್ನೂ ಅರ್ಪಿಸುತ್ತಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಿವೆ.

ಕಳೆದ ಒಂದು ತಿಂಗಳಲ್ಲಿ 58 ದೇಗುಲಗಳ ಹುಂಡಿಯಲ್ಲಿ 25 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ 11ರ ವರೆಗೆ ಪ್ರತಿಷ್ಠಿತ 58 ದೇಗುಲಗಳಲ್ಲಿ ಇ-ಹುಂಡಿ ಮೂಲಕ 19 ಕೋಟಿ ಆದಾಯ ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಆದಾಯದಲ್ಲಿ ಭಾರೀ ಏರಿಕೆ ಕಂಡಿದೆ. ಮ್ಯಾನ್ಯುಯಲ್ ಹುಂಡಿಗಳನ್ನ ತೆರೆದರೆ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಲಿದೆ ಎನ್ನಲಾಗಿದೆ.

ಯಾವ ದೇವಾಲಯಗಳಿಗೆ ಎಷ್ಟು ಆದಾಯ? : 2022ರ ಜೂನ್ 11 ರಿಂದ ಜುಲೈ 15ರ ವರೆಗೆ ಹೋಲಿಕೆ ಮಾಡಿದ್ರೆ 2023 ಜೂನ್ 11 ರಿಂದ ಜುಲೈ 15ರ ವರೆಗೆ ದೇವಸ್ಥಾನಗಳ ಆದಾಯದಲ್ಲಿ ಹೆಚ್ಚಳವಾಗಿರುವುದು ಕಂಡುಬಂದಿದೆ.

ಕುಕ್ಕೆ ಸುಬ್ರಮಣ್ಯ ದೇವಾಲಯ
ಕಳೆದ ವರ್ಷ – 11.13 ಕೋಟಿ ರೂ.
ಈ ವರ್ಷ – 11.16 ಕೋಟಿ ರೂ.

ಮೈಸೂರಿನ ಚಾಮುಂಡೇಶ್ವರಿ
ಕಳೆದ ವರ್ಷ – 48.01 ಲಕ್ಷ ರೂ.
ಈ ವರ್ಷ – 3.63 ಕೋಟಿ ರೂ.

ಯಡಿಯೂರು ಸಿದ್ದಲಿಂಗೇಶ್ವರ
ಕಳೆದ ವರ್ಷ – 1.20 ಕೋಟಿ ರೂ.
ಈ ವರ್ಷ – 1.48 ಕೋಟಿ ರೂ.

ನಂಜನಗೂಡು ಶ್ರೀಕಂಠೇಶ್ವರ
ಕಳೆದ ವರ್ಷ – 1.05 ಕೋಟಿ ರೂ.
ಈ ವರ್ಷ – 1.27 ಕೋಟಿ ರೂ.

ಕೊಪ್ಪಳ ಜಿಲ್ಲೆ ಹುಲಿಗೆಮ್ಮದೇವಿ
ಕಳೆದ ವರ್ಷ – 1.02 ಕೋಟಿ ರೂ.
ಈ ವರ್ಷ – 1.41 ಕೋಟಿ ರೂ.

ಬೆಂಗಳೂರು ಬನಶಂಕರಿ
ಕಳೆದ ವರ್ಷ – 65.82 ಲಕ್ಷ ರೂ.
ಈ ವರ್ಷ – 83.64 ಲಕ್ಷ ರೂ.

ದ.ಕನ್ನಡ ಮಹಾಲಿಂಗೇಶ್ವರ
ಕಳೆದ ವರ್ಷ – 43.33 ಲಕ್ಷ ರೂ.
ಈ ವರ್ಷ – 48.09 ಲಕ್ಷ ರೂ.

ಶ್ರೀರಂಗಪಟ್ಟಣ ನಿಮಿಷಾಂಬ ದೇವಾಲಯ

ಕಳೆದ ವರ್ಷ – 20.76 ಲಕ್ಷ ರೂ.
ಈ ವರ್ಷ – 27.98 ಲಕ್ಷ ರೂ.

ಕನಕಪುರದ ಕಬ್ಬಾಳಮ್ಮ
ಕಳೆದ ವರ್ಷ – 13.96 ಲಕ್ಷ ರೂ.
ಈ ವರ್ಷ – 19.64 ಲಕ್ಷ ರೂ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

2 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

11 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

12 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

18 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

19 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

21 hours ago