Advertisement
ಸುದ್ದಿಗಳು

#ShaktiYojane |ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ `ಶಕ್ತಿ` | ಕೋಟಿ ಕೋಟಿ ಕಾಣಿಕೆ ಸಂಗ್ರಹ ಕಂಡ ದೇವಾಲಯಗಳು…!

Share

ಸರ್ಕಾರದ ಕೆಲವೊಂದು ಯೋಜನೆಗಳು ಫಲಾನುಭವಿಗಳಿಗೆ ಮಾತ್ರ ಪ್ರಯೋಜನವಾಗದೆ ಇನ್ನಿತರ ಮೂಲಗಳಿಗೂ ಸಹಾಯವಾಗುತ್ತದೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆ ಬಗ್ಗೆ ಬೇರೆ ಯಾವುದೇ ಅಸಮಾಧಾನ ಇದ್ದರೂ ಪುಣ್ಯ ಕ್ಷೇತ್ರಗಳಿಗೆ ಇದರಿಂದ ಲಾಭವೇ ಆಗಿದೆ. ಅಷ್ಟೇ ಅಲ್ಲದೆ ದೇವಾಲಯಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೂ ತಕ್ಕ ಮಟ್ಟಿನ ಲಾಭ ತಂದಿದೆ ಎಂದೇ ಹೇಳಬಹುದು.

Advertisement
Advertisement

ಶಕ್ತಿ ಯೋಜನೆಯಿಂದ #Shakti Scheme ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ರಾಜ್ಯಾದ್ಯಂತ ದೇಗುಲಗಳಿಗೆ ನಾರಿಮಣಿಯರು ದಾಂಗುಡಿ ಇಡುತ್ತಿದ್ದಾರೆ. ವಾರಾಂತ್ಯಗಳಲ್ಲಂತು ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜೊತೆಗೆ ಕಾಣಿಕೆಗಳನ್ನೂ ಅರ್ಪಿಸುತ್ತಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಿವೆ.

Advertisement
ಕಳೆದ ಒಂದು ತಿಂಗಳಲ್ಲಿ 58 ದೇಗುಲಗಳ ಹುಂಡಿಯಲ್ಲಿ 25 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ 11ರ ವರೆಗೆ ಪ್ರತಿಷ್ಠಿತ 58 ದೇಗುಲಗಳಲ್ಲಿ ಇ-ಹುಂಡಿ ಮೂಲಕ 19 ಕೋಟಿ ಆದಾಯ ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಆದಾಯದಲ್ಲಿ ಭಾರೀ ಏರಿಕೆ ಕಂಡಿದೆ. ಮ್ಯಾನ್ಯುಯಲ್ ಹುಂಡಿಗಳನ್ನ ತೆರೆದರೆ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಲಿದೆ ಎನ್ನಲಾಗಿದೆ.

ಯಾವ ದೇವಾಲಯಗಳಿಗೆ ಎಷ್ಟು ಆದಾಯ? : 2022ರ ಜೂನ್ 11 ರಿಂದ ಜುಲೈ 15ರ ವರೆಗೆ ಹೋಲಿಕೆ ಮಾಡಿದ್ರೆ 2023 ಜೂನ್ 11 ರಿಂದ ಜುಲೈ 15ರ ವರೆಗೆ ದೇವಸ್ಥಾನಗಳ ಆದಾಯದಲ್ಲಿ ಹೆಚ್ಚಳವಾಗಿರುವುದು ಕಂಡುಬಂದಿದೆ.

ಕುಕ್ಕೆ ಸುಬ್ರಮಣ್ಯ ದೇವಾಲಯ
ಕಳೆದ ವರ್ಷ – 11.13 ಕೋಟಿ ರೂ.
ಈ ವರ್ಷ – 11.16 ಕೋಟಿ ರೂ.

Advertisement

ಮೈಸೂರಿನ ಚಾಮುಂಡೇಶ್ವರಿ
ಕಳೆದ ವರ್ಷ – 48.01 ಲಕ್ಷ ರೂ.
ಈ ವರ್ಷ – 3.63 ಕೋಟಿ ರೂ.

ಯಡಿಯೂರು ಸಿದ್ದಲಿಂಗೇಶ್ವರ
ಕಳೆದ ವರ್ಷ – 1.20 ಕೋಟಿ ರೂ.
ಈ ವರ್ಷ – 1.48 ಕೋಟಿ ರೂ.

Advertisement

ನಂಜನಗೂಡು ಶ್ರೀಕಂಠೇಶ್ವರ
ಕಳೆದ ವರ್ಷ – 1.05 ಕೋಟಿ ರೂ.
ಈ ವರ್ಷ – 1.27 ಕೋಟಿ ರೂ.

ಕೊಪ್ಪಳ ಜಿಲ್ಲೆ ಹುಲಿಗೆಮ್ಮದೇವಿ
ಕಳೆದ ವರ್ಷ – 1.02 ಕೋಟಿ ರೂ.
ಈ ವರ್ಷ – 1.41 ಕೋಟಿ ರೂ.

Advertisement

ಬೆಂಗಳೂರು ಬನಶಂಕರಿ
ಕಳೆದ ವರ್ಷ – 65.82 ಲಕ್ಷ ರೂ.
ಈ ವರ್ಷ – 83.64 ಲಕ್ಷ ರೂ.

ದ.ಕನ್ನಡ ಮಹಾಲಿಂಗೇಶ್ವರ
ಕಳೆದ ವರ್ಷ – 43.33 ಲಕ್ಷ ರೂ.
ಈ ವರ್ಷ – 48.09 ಲಕ್ಷ ರೂ.

Advertisement
ಶ್ರೀರಂಗಪಟ್ಟಣ ನಿಮಿಷಾಂಬ ದೇವಾಲಯ

ಕಳೆದ ವರ್ಷ – 20.76 ಲಕ್ಷ ರೂ.
ಈ ವರ್ಷ – 27.98 ಲಕ್ಷ ರೂ.

ಕನಕಪುರದ ಕಬ್ಬಾಳಮ್ಮ
ಕಳೆದ ವರ್ಷ – 13.96 ಲಕ್ಷ ರೂ.
ಈ ವರ್ಷ – 19.64 ಲಕ್ಷ ರೂ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

3 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

10 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

10 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

13 hours ago