Advertisement
ಸುದ್ದಿಗಳು

#ShaktiYojane |ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ `ಶಕ್ತಿ` | ಕೋಟಿ ಕೋಟಿ ಕಾಣಿಕೆ ಸಂಗ್ರಹ ಕಂಡ ದೇವಾಲಯಗಳು…!

Share

ಸರ್ಕಾರದ ಕೆಲವೊಂದು ಯೋಜನೆಗಳು ಫಲಾನುಭವಿಗಳಿಗೆ ಮಾತ್ರ ಪ್ರಯೋಜನವಾಗದೆ ಇನ್ನಿತರ ಮೂಲಗಳಿಗೂ ಸಹಾಯವಾಗುತ್ತದೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆ ಬಗ್ಗೆ ಬೇರೆ ಯಾವುದೇ ಅಸಮಾಧಾನ ಇದ್ದರೂ ಪುಣ್ಯ ಕ್ಷೇತ್ರಗಳಿಗೆ ಇದರಿಂದ ಲಾಭವೇ ಆಗಿದೆ. ಅಷ್ಟೇ ಅಲ್ಲದೆ ದೇವಾಲಯಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೂ ತಕ್ಕ ಮಟ್ಟಿನ ಲಾಭ ತಂದಿದೆ ಎಂದೇ ಹೇಳಬಹುದು.

ಶಕ್ತಿ ಯೋಜನೆಯಿಂದ #Shakti Scheme ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ರಾಜ್ಯಾದ್ಯಂತ ದೇಗುಲಗಳಿಗೆ ನಾರಿಮಣಿಯರು ದಾಂಗುಡಿ ಇಡುತ್ತಿದ್ದಾರೆ. ವಾರಾಂತ್ಯಗಳಲ್ಲಂತು ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜೊತೆಗೆ ಕಾಣಿಕೆಗಳನ್ನೂ ಅರ್ಪಿಸುತ್ತಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಿವೆ.

ಕಳೆದ ಒಂದು ತಿಂಗಳಲ್ಲಿ 58 ದೇಗುಲಗಳ ಹುಂಡಿಯಲ್ಲಿ 25 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ 11ರ ವರೆಗೆ ಪ್ರತಿಷ್ಠಿತ 58 ದೇಗುಲಗಳಲ್ಲಿ ಇ-ಹುಂಡಿ ಮೂಲಕ 19 ಕೋಟಿ ಆದಾಯ ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಆದಾಯದಲ್ಲಿ ಭಾರೀ ಏರಿಕೆ ಕಂಡಿದೆ. ಮ್ಯಾನ್ಯುಯಲ್ ಹುಂಡಿಗಳನ್ನ ತೆರೆದರೆ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಲಿದೆ ಎನ್ನಲಾಗಿದೆ.

ಯಾವ ದೇವಾಲಯಗಳಿಗೆ ಎಷ್ಟು ಆದಾಯ? : 2022ರ ಜೂನ್ 11 ರಿಂದ ಜುಲೈ 15ರ ವರೆಗೆ ಹೋಲಿಕೆ ಮಾಡಿದ್ರೆ 2023 ಜೂನ್ 11 ರಿಂದ ಜುಲೈ 15ರ ವರೆಗೆ ದೇವಸ್ಥಾನಗಳ ಆದಾಯದಲ್ಲಿ ಹೆಚ್ಚಳವಾಗಿರುವುದು ಕಂಡುಬಂದಿದೆ.

ಕುಕ್ಕೆ ಸುಬ್ರಮಣ್ಯ ದೇವಾಲಯ
ಕಳೆದ ವರ್ಷ – 11.13 ಕೋಟಿ ರೂ.
ಈ ವರ್ಷ – 11.16 ಕೋಟಿ ರೂ.

ಮೈಸೂರಿನ ಚಾಮುಂಡೇಶ್ವರಿ
ಕಳೆದ ವರ್ಷ – 48.01 ಲಕ್ಷ ರೂ.
ಈ ವರ್ಷ – 3.63 ಕೋಟಿ ರೂ.

ಯಡಿಯೂರು ಸಿದ್ದಲಿಂಗೇಶ್ವರ
ಕಳೆದ ವರ್ಷ – 1.20 ಕೋಟಿ ರೂ.
ಈ ವರ್ಷ – 1.48 ಕೋಟಿ ರೂ.

ನಂಜನಗೂಡು ಶ್ರೀಕಂಠೇಶ್ವರ
ಕಳೆದ ವರ್ಷ – 1.05 ಕೋಟಿ ರೂ.
ಈ ವರ್ಷ – 1.27 ಕೋಟಿ ರೂ.

ಕೊಪ್ಪಳ ಜಿಲ್ಲೆ ಹುಲಿಗೆಮ್ಮದೇವಿ
ಕಳೆದ ವರ್ಷ – 1.02 ಕೋಟಿ ರೂ.
ಈ ವರ್ಷ – 1.41 ಕೋಟಿ ರೂ.

ಬೆಂಗಳೂರು ಬನಶಂಕರಿ
ಕಳೆದ ವರ್ಷ – 65.82 ಲಕ್ಷ ರೂ.
ಈ ವರ್ಷ – 83.64 ಲಕ್ಷ ರೂ.

ದ.ಕನ್ನಡ ಮಹಾಲಿಂಗೇಶ್ವರ
ಕಳೆದ ವರ್ಷ – 43.33 ಲಕ್ಷ ರೂ.
ಈ ವರ್ಷ – 48.09 ಲಕ್ಷ ರೂ.

ಶ್ರೀರಂಗಪಟ್ಟಣ ನಿಮಿಷಾಂಬ ದೇವಾಲಯ

ಕಳೆದ ವರ್ಷ – 20.76 ಲಕ್ಷ ರೂ.
ಈ ವರ್ಷ – 27.98 ಲಕ್ಷ ರೂ.

ಕನಕಪುರದ ಕಬ್ಬಾಳಮ್ಮ
ಕಳೆದ ವರ್ಷ – 13.96 ಲಕ್ಷ ರೂ.
ಈ ವರ್ಷ – 19.64 ಲಕ್ಷ ರೂ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

6 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

15 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

15 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

19 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

20 hours ago