Advertisement
ಸುದ್ದಿಗಳು

#ShaktiYojane |ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ `ಶಕ್ತಿ` | ಕೋಟಿ ಕೋಟಿ ಕಾಣಿಕೆ ಸಂಗ್ರಹ ಕಂಡ ದೇವಾಲಯಗಳು…!

Share

ಸರ್ಕಾರದ ಕೆಲವೊಂದು ಯೋಜನೆಗಳು ಫಲಾನುಭವಿಗಳಿಗೆ ಮಾತ್ರ ಪ್ರಯೋಜನವಾಗದೆ ಇನ್ನಿತರ ಮೂಲಗಳಿಗೂ ಸಹಾಯವಾಗುತ್ತದೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆ ಬಗ್ಗೆ ಬೇರೆ ಯಾವುದೇ ಅಸಮಾಧಾನ ಇದ್ದರೂ ಪುಣ್ಯ ಕ್ಷೇತ್ರಗಳಿಗೆ ಇದರಿಂದ ಲಾಭವೇ ಆಗಿದೆ. ಅಷ್ಟೇ ಅಲ್ಲದೆ ದೇವಾಲಯಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೂ ತಕ್ಕ ಮಟ್ಟಿನ ಲಾಭ ತಂದಿದೆ ಎಂದೇ ಹೇಳಬಹುದು.

ಶಕ್ತಿ ಯೋಜನೆಯಿಂದ #Shakti Scheme ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ರಾಜ್ಯಾದ್ಯಂತ ದೇಗುಲಗಳಿಗೆ ನಾರಿಮಣಿಯರು ದಾಂಗುಡಿ ಇಡುತ್ತಿದ್ದಾರೆ. ವಾರಾಂತ್ಯಗಳಲ್ಲಂತು ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜೊತೆಗೆ ಕಾಣಿಕೆಗಳನ್ನೂ ಅರ್ಪಿಸುತ್ತಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಿವೆ.

ಕಳೆದ ಒಂದು ತಿಂಗಳಲ್ಲಿ 58 ದೇಗುಲಗಳ ಹುಂಡಿಯಲ್ಲಿ 25 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ 11ರ ವರೆಗೆ ಪ್ರತಿಷ್ಠಿತ 58 ದೇಗುಲಗಳಲ್ಲಿ ಇ-ಹುಂಡಿ ಮೂಲಕ 19 ಕೋಟಿ ಆದಾಯ ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಆದಾಯದಲ್ಲಿ ಭಾರೀ ಏರಿಕೆ ಕಂಡಿದೆ. ಮ್ಯಾನ್ಯುಯಲ್ ಹುಂಡಿಗಳನ್ನ ತೆರೆದರೆ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಲಿದೆ ಎನ್ನಲಾಗಿದೆ.

ಯಾವ ದೇವಾಲಯಗಳಿಗೆ ಎಷ್ಟು ಆದಾಯ? : 2022ರ ಜೂನ್ 11 ರಿಂದ ಜುಲೈ 15ರ ವರೆಗೆ ಹೋಲಿಕೆ ಮಾಡಿದ್ರೆ 2023 ಜೂನ್ 11 ರಿಂದ ಜುಲೈ 15ರ ವರೆಗೆ ದೇವಸ್ಥಾನಗಳ ಆದಾಯದಲ್ಲಿ ಹೆಚ್ಚಳವಾಗಿರುವುದು ಕಂಡುಬಂದಿದೆ.

ಕುಕ್ಕೆ ಸುಬ್ರಮಣ್ಯ ದೇವಾಲಯ
ಕಳೆದ ವರ್ಷ – 11.13 ಕೋಟಿ ರೂ.
ಈ ವರ್ಷ – 11.16 ಕೋಟಿ ರೂ.

ಮೈಸೂರಿನ ಚಾಮುಂಡೇಶ್ವರಿ
ಕಳೆದ ವರ್ಷ – 48.01 ಲಕ್ಷ ರೂ.
ಈ ವರ್ಷ – 3.63 ಕೋಟಿ ರೂ.

ಯಡಿಯೂರು ಸಿದ್ದಲಿಂಗೇಶ್ವರ
ಕಳೆದ ವರ್ಷ – 1.20 ಕೋಟಿ ರೂ.
ಈ ವರ್ಷ – 1.48 ಕೋಟಿ ರೂ.

ನಂಜನಗೂಡು ಶ್ರೀಕಂಠೇಶ್ವರ
ಕಳೆದ ವರ್ಷ – 1.05 ಕೋಟಿ ರೂ.
ಈ ವರ್ಷ – 1.27 ಕೋಟಿ ರೂ.

ಕೊಪ್ಪಳ ಜಿಲ್ಲೆ ಹುಲಿಗೆಮ್ಮದೇವಿ
ಕಳೆದ ವರ್ಷ – 1.02 ಕೋಟಿ ರೂ.
ಈ ವರ್ಷ – 1.41 ಕೋಟಿ ರೂ.

ಬೆಂಗಳೂರು ಬನಶಂಕರಿ
ಕಳೆದ ವರ್ಷ – 65.82 ಲಕ್ಷ ರೂ.
ಈ ವರ್ಷ – 83.64 ಲಕ್ಷ ರೂ.

ದ.ಕನ್ನಡ ಮಹಾಲಿಂಗೇಶ್ವರ
ಕಳೆದ ವರ್ಷ – 43.33 ಲಕ್ಷ ರೂ.
ಈ ವರ್ಷ – 48.09 ಲಕ್ಷ ರೂ.

ಶ್ರೀರಂಗಪಟ್ಟಣ ನಿಮಿಷಾಂಬ ದೇವಾಲಯ

ಕಳೆದ ವರ್ಷ – 20.76 ಲಕ್ಷ ರೂ.
ಈ ವರ್ಷ – 27.98 ಲಕ್ಷ ರೂ.

ಕನಕಪುರದ ಕಬ್ಬಾಳಮ್ಮ
ಕಳೆದ ವರ್ಷ – 13.96 ಲಕ್ಷ ರೂ.
ಈ ವರ್ಷ – 19.64 ಲಕ್ಷ ರೂ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

9 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago