Advertisement
ಸುದ್ದಿಗಳು

#ShaktiYojane |ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ `ಶಕ್ತಿ` | ಕೋಟಿ ಕೋಟಿ ಕಾಣಿಕೆ ಸಂಗ್ರಹ ಕಂಡ ದೇವಾಲಯಗಳು…!

Share

ಸರ್ಕಾರದ ಕೆಲವೊಂದು ಯೋಜನೆಗಳು ಫಲಾನುಭವಿಗಳಿಗೆ ಮಾತ್ರ ಪ್ರಯೋಜನವಾಗದೆ ಇನ್ನಿತರ ಮೂಲಗಳಿಗೂ ಸಹಾಯವಾಗುತ್ತದೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆ ಬಗ್ಗೆ ಬೇರೆ ಯಾವುದೇ ಅಸಮಾಧಾನ ಇದ್ದರೂ ಪುಣ್ಯ ಕ್ಷೇತ್ರಗಳಿಗೆ ಇದರಿಂದ ಲಾಭವೇ ಆಗಿದೆ. ಅಷ್ಟೇ ಅಲ್ಲದೆ ದೇವಾಲಯಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೂ ತಕ್ಕ ಮಟ್ಟಿನ ಲಾಭ ತಂದಿದೆ ಎಂದೇ ಹೇಳಬಹುದು.

ಶಕ್ತಿ ಯೋಜನೆಯಿಂದ #Shakti Scheme ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ರಾಜ್ಯಾದ್ಯಂತ ದೇಗುಲಗಳಿಗೆ ನಾರಿಮಣಿಯರು ದಾಂಗುಡಿ ಇಡುತ್ತಿದ್ದಾರೆ. ವಾರಾಂತ್ಯಗಳಲ್ಲಂತು ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜೊತೆಗೆ ಕಾಣಿಕೆಗಳನ್ನೂ ಅರ್ಪಿಸುತ್ತಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಿವೆ.

ಕಳೆದ ಒಂದು ತಿಂಗಳಲ್ಲಿ 58 ದೇಗುಲಗಳ ಹುಂಡಿಯಲ್ಲಿ 25 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ 11ರ ವರೆಗೆ ಪ್ರತಿಷ್ಠಿತ 58 ದೇಗುಲಗಳಲ್ಲಿ ಇ-ಹುಂಡಿ ಮೂಲಕ 19 ಕೋಟಿ ಆದಾಯ ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಆದಾಯದಲ್ಲಿ ಭಾರೀ ಏರಿಕೆ ಕಂಡಿದೆ. ಮ್ಯಾನ್ಯುಯಲ್ ಹುಂಡಿಗಳನ್ನ ತೆರೆದರೆ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಲಿದೆ ಎನ್ನಲಾಗಿದೆ.

ಯಾವ ದೇವಾಲಯಗಳಿಗೆ ಎಷ್ಟು ಆದಾಯ? : 2022ರ ಜೂನ್ 11 ರಿಂದ ಜುಲೈ 15ರ ವರೆಗೆ ಹೋಲಿಕೆ ಮಾಡಿದ್ರೆ 2023 ಜೂನ್ 11 ರಿಂದ ಜುಲೈ 15ರ ವರೆಗೆ ದೇವಸ್ಥಾನಗಳ ಆದಾಯದಲ್ಲಿ ಹೆಚ್ಚಳವಾಗಿರುವುದು ಕಂಡುಬಂದಿದೆ.

ಕುಕ್ಕೆ ಸುಬ್ರಮಣ್ಯ ದೇವಾಲಯ
ಕಳೆದ ವರ್ಷ – 11.13 ಕೋಟಿ ರೂ.
ಈ ವರ್ಷ – 11.16 ಕೋಟಿ ರೂ.

ಮೈಸೂರಿನ ಚಾಮುಂಡೇಶ್ವರಿ
ಕಳೆದ ವರ್ಷ – 48.01 ಲಕ್ಷ ರೂ.
ಈ ವರ್ಷ – 3.63 ಕೋಟಿ ರೂ.

ಯಡಿಯೂರು ಸಿದ್ದಲಿಂಗೇಶ್ವರ
ಕಳೆದ ವರ್ಷ – 1.20 ಕೋಟಿ ರೂ.
ಈ ವರ್ಷ – 1.48 ಕೋಟಿ ರೂ.

ನಂಜನಗೂಡು ಶ್ರೀಕಂಠೇಶ್ವರ
ಕಳೆದ ವರ್ಷ – 1.05 ಕೋಟಿ ರೂ.
ಈ ವರ್ಷ – 1.27 ಕೋಟಿ ರೂ.

ಕೊಪ್ಪಳ ಜಿಲ್ಲೆ ಹುಲಿಗೆಮ್ಮದೇವಿ
ಕಳೆದ ವರ್ಷ – 1.02 ಕೋಟಿ ರೂ.
ಈ ವರ್ಷ – 1.41 ಕೋಟಿ ರೂ.

ಬೆಂಗಳೂರು ಬನಶಂಕರಿ
ಕಳೆದ ವರ್ಷ – 65.82 ಲಕ್ಷ ರೂ.
ಈ ವರ್ಷ – 83.64 ಲಕ್ಷ ರೂ.

ದ.ಕನ್ನಡ ಮಹಾಲಿಂಗೇಶ್ವರ
ಕಳೆದ ವರ್ಷ – 43.33 ಲಕ್ಷ ರೂ.
ಈ ವರ್ಷ – 48.09 ಲಕ್ಷ ರೂ.

ಶ್ರೀರಂಗಪಟ್ಟಣ ನಿಮಿಷಾಂಬ ದೇವಾಲಯ

ಕಳೆದ ವರ್ಷ – 20.76 ಲಕ್ಷ ರೂ.
ಈ ವರ್ಷ – 27.98 ಲಕ್ಷ ರೂ.

ಕನಕಪುರದ ಕಬ್ಬಾಳಮ್ಮ
ಕಳೆದ ವರ್ಷ – 13.96 ಲಕ್ಷ ರೂ.
ಈ ವರ್ಷ – 19.64 ಲಕ್ಷ ರೂ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

4 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

4 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

18 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

22 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago