Advertisement
ಸುದ್ದಿಗಳು

#ShaktiYojane |ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ `ಶಕ್ತಿ` | ಕೋಟಿ ಕೋಟಿ ಕಾಣಿಕೆ ಸಂಗ್ರಹ ಕಂಡ ದೇವಾಲಯಗಳು…!

Share

ಸರ್ಕಾರದ ಕೆಲವೊಂದು ಯೋಜನೆಗಳು ಫಲಾನುಭವಿಗಳಿಗೆ ಮಾತ್ರ ಪ್ರಯೋಜನವಾಗದೆ ಇನ್ನಿತರ ಮೂಲಗಳಿಗೂ ಸಹಾಯವಾಗುತ್ತದೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆ ಬಗ್ಗೆ ಬೇರೆ ಯಾವುದೇ ಅಸಮಾಧಾನ ಇದ್ದರೂ ಪುಣ್ಯ ಕ್ಷೇತ್ರಗಳಿಗೆ ಇದರಿಂದ ಲಾಭವೇ ಆಗಿದೆ. ಅಷ್ಟೇ ಅಲ್ಲದೆ ದೇವಾಲಯಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೂ ತಕ್ಕ ಮಟ್ಟಿನ ಲಾಭ ತಂದಿದೆ ಎಂದೇ ಹೇಳಬಹುದು.

ಶಕ್ತಿ ಯೋಜನೆಯಿಂದ #Shakti Scheme ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ರಾಜ್ಯಾದ್ಯಂತ ದೇಗುಲಗಳಿಗೆ ನಾರಿಮಣಿಯರು ದಾಂಗುಡಿ ಇಡುತ್ತಿದ್ದಾರೆ. ವಾರಾಂತ್ಯಗಳಲ್ಲಂತು ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜೊತೆಗೆ ಕಾಣಿಕೆಗಳನ್ನೂ ಅರ್ಪಿಸುತ್ತಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಿವೆ.

ಕಳೆದ ಒಂದು ತಿಂಗಳಲ್ಲಿ 58 ದೇಗುಲಗಳ ಹುಂಡಿಯಲ್ಲಿ 25 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ 11ರ ವರೆಗೆ ಪ್ರತಿಷ್ಠಿತ 58 ದೇಗುಲಗಳಲ್ಲಿ ಇ-ಹುಂಡಿ ಮೂಲಕ 19 ಕೋಟಿ ಆದಾಯ ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಆದಾಯದಲ್ಲಿ ಭಾರೀ ಏರಿಕೆ ಕಂಡಿದೆ. ಮ್ಯಾನ್ಯುಯಲ್ ಹುಂಡಿಗಳನ್ನ ತೆರೆದರೆ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಲಿದೆ ಎನ್ನಲಾಗಿದೆ.

ಯಾವ ದೇವಾಲಯಗಳಿಗೆ ಎಷ್ಟು ಆದಾಯ? : 2022ರ ಜೂನ್ 11 ರಿಂದ ಜುಲೈ 15ರ ವರೆಗೆ ಹೋಲಿಕೆ ಮಾಡಿದ್ರೆ 2023 ಜೂನ್ 11 ರಿಂದ ಜುಲೈ 15ರ ವರೆಗೆ ದೇವಸ್ಥಾನಗಳ ಆದಾಯದಲ್ಲಿ ಹೆಚ್ಚಳವಾಗಿರುವುದು ಕಂಡುಬಂದಿದೆ.

ಕುಕ್ಕೆ ಸುಬ್ರಮಣ್ಯ ದೇವಾಲಯ
ಕಳೆದ ವರ್ಷ – 11.13 ಕೋಟಿ ರೂ.
ಈ ವರ್ಷ – 11.16 ಕೋಟಿ ರೂ.

ಮೈಸೂರಿನ ಚಾಮುಂಡೇಶ್ವರಿ
ಕಳೆದ ವರ್ಷ – 48.01 ಲಕ್ಷ ರೂ.
ಈ ವರ್ಷ – 3.63 ಕೋಟಿ ರೂ.

ಯಡಿಯೂರು ಸಿದ್ದಲಿಂಗೇಶ್ವರ
ಕಳೆದ ವರ್ಷ – 1.20 ಕೋಟಿ ರೂ.
ಈ ವರ್ಷ – 1.48 ಕೋಟಿ ರೂ.

ನಂಜನಗೂಡು ಶ್ರೀಕಂಠೇಶ್ವರ
ಕಳೆದ ವರ್ಷ – 1.05 ಕೋಟಿ ರೂ.
ಈ ವರ್ಷ – 1.27 ಕೋಟಿ ರೂ.

ಕೊಪ್ಪಳ ಜಿಲ್ಲೆ ಹುಲಿಗೆಮ್ಮದೇವಿ
ಕಳೆದ ವರ್ಷ – 1.02 ಕೋಟಿ ರೂ.
ಈ ವರ್ಷ – 1.41 ಕೋಟಿ ರೂ.

ಬೆಂಗಳೂರು ಬನಶಂಕರಿ
ಕಳೆದ ವರ್ಷ – 65.82 ಲಕ್ಷ ರೂ.
ಈ ವರ್ಷ – 83.64 ಲಕ್ಷ ರೂ.

ದ.ಕನ್ನಡ ಮಹಾಲಿಂಗೇಶ್ವರ
ಕಳೆದ ವರ್ಷ – 43.33 ಲಕ್ಷ ರೂ.
ಈ ವರ್ಷ – 48.09 ಲಕ್ಷ ರೂ.

ಶ್ರೀರಂಗಪಟ್ಟಣ ನಿಮಿಷಾಂಬ ದೇವಾಲಯ

ಕಳೆದ ವರ್ಷ – 20.76 ಲಕ್ಷ ರೂ.
ಈ ವರ್ಷ – 27.98 ಲಕ್ಷ ರೂ.

ಕನಕಪುರದ ಕಬ್ಬಾಳಮ್ಮ
ಕಳೆದ ವರ್ಷ – 13.96 ಲಕ್ಷ ರೂ.
ಈ ವರ್ಷ – 19.64 ಲಕ್ಷ ರೂ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

56 minutes ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 hour ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

8 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

10 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

17 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

19 hours ago