Advertisement
ಸುದ್ದಿಗಳು

#ShaktiYojane |ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ `ಶಕ್ತಿ` | ಕೋಟಿ ಕೋಟಿ ಕಾಣಿಕೆ ಸಂಗ್ರಹ ಕಂಡ ದೇವಾಲಯಗಳು…!

Share

ಸರ್ಕಾರದ ಕೆಲವೊಂದು ಯೋಜನೆಗಳು ಫಲಾನುಭವಿಗಳಿಗೆ ಮಾತ್ರ ಪ್ರಯೋಜನವಾಗದೆ ಇನ್ನಿತರ ಮೂಲಗಳಿಗೂ ಸಹಾಯವಾಗುತ್ತದೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆ ಬಗ್ಗೆ ಬೇರೆ ಯಾವುದೇ ಅಸಮಾಧಾನ ಇದ್ದರೂ ಪುಣ್ಯ ಕ್ಷೇತ್ರಗಳಿಗೆ ಇದರಿಂದ ಲಾಭವೇ ಆಗಿದೆ. ಅಷ್ಟೇ ಅಲ್ಲದೆ ದೇವಾಲಯಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೂ ತಕ್ಕ ಮಟ್ಟಿನ ಲಾಭ ತಂದಿದೆ ಎಂದೇ ಹೇಳಬಹುದು.

ಶಕ್ತಿ ಯೋಜನೆಯಿಂದ #Shakti Scheme ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ರಾಜ್ಯಾದ್ಯಂತ ದೇಗುಲಗಳಿಗೆ ನಾರಿಮಣಿಯರು ದಾಂಗುಡಿ ಇಡುತ್ತಿದ್ದಾರೆ. ವಾರಾಂತ್ಯಗಳಲ್ಲಂತು ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜೊತೆಗೆ ಕಾಣಿಕೆಗಳನ್ನೂ ಅರ್ಪಿಸುತ್ತಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಿವೆ.

ಕಳೆದ ಒಂದು ತಿಂಗಳಲ್ಲಿ 58 ದೇಗುಲಗಳ ಹುಂಡಿಯಲ್ಲಿ 25 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ 11ರ ವರೆಗೆ ಪ್ರತಿಷ್ಠಿತ 58 ದೇಗುಲಗಳಲ್ಲಿ ಇ-ಹುಂಡಿ ಮೂಲಕ 19 ಕೋಟಿ ಆದಾಯ ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಆದಾಯದಲ್ಲಿ ಭಾರೀ ಏರಿಕೆ ಕಂಡಿದೆ. ಮ್ಯಾನ್ಯುಯಲ್ ಹುಂಡಿಗಳನ್ನ ತೆರೆದರೆ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಲಿದೆ ಎನ್ನಲಾಗಿದೆ.

ಯಾವ ದೇವಾಲಯಗಳಿಗೆ ಎಷ್ಟು ಆದಾಯ? : 2022ರ ಜೂನ್ 11 ರಿಂದ ಜುಲೈ 15ರ ವರೆಗೆ ಹೋಲಿಕೆ ಮಾಡಿದ್ರೆ 2023 ಜೂನ್ 11 ರಿಂದ ಜುಲೈ 15ರ ವರೆಗೆ ದೇವಸ್ಥಾನಗಳ ಆದಾಯದಲ್ಲಿ ಹೆಚ್ಚಳವಾಗಿರುವುದು ಕಂಡುಬಂದಿದೆ.

ಕುಕ್ಕೆ ಸುಬ್ರಮಣ್ಯ ದೇವಾಲಯ
ಕಳೆದ ವರ್ಷ – 11.13 ಕೋಟಿ ರೂ.
ಈ ವರ್ಷ – 11.16 ಕೋಟಿ ರೂ.

ಮೈಸೂರಿನ ಚಾಮುಂಡೇಶ್ವರಿ
ಕಳೆದ ವರ್ಷ – 48.01 ಲಕ್ಷ ರೂ.
ಈ ವರ್ಷ – 3.63 ಕೋಟಿ ರೂ.

ಯಡಿಯೂರು ಸಿದ್ದಲಿಂಗೇಶ್ವರ
ಕಳೆದ ವರ್ಷ – 1.20 ಕೋಟಿ ರೂ.
ಈ ವರ್ಷ – 1.48 ಕೋಟಿ ರೂ.

ನಂಜನಗೂಡು ಶ್ರೀಕಂಠೇಶ್ವರ
ಕಳೆದ ವರ್ಷ – 1.05 ಕೋಟಿ ರೂ.
ಈ ವರ್ಷ – 1.27 ಕೋಟಿ ರೂ.

ಕೊಪ್ಪಳ ಜಿಲ್ಲೆ ಹುಲಿಗೆಮ್ಮದೇವಿ
ಕಳೆದ ವರ್ಷ – 1.02 ಕೋಟಿ ರೂ.
ಈ ವರ್ಷ – 1.41 ಕೋಟಿ ರೂ.

ಬೆಂಗಳೂರು ಬನಶಂಕರಿ
ಕಳೆದ ವರ್ಷ – 65.82 ಲಕ್ಷ ರೂ.
ಈ ವರ್ಷ – 83.64 ಲಕ್ಷ ರೂ.

ದ.ಕನ್ನಡ ಮಹಾಲಿಂಗೇಶ್ವರ
ಕಳೆದ ವರ್ಷ – 43.33 ಲಕ್ಷ ರೂ.
ಈ ವರ್ಷ – 48.09 ಲಕ್ಷ ರೂ.

ಶ್ರೀರಂಗಪಟ್ಟಣ ನಿಮಿಷಾಂಬ ದೇವಾಲಯ

ಕಳೆದ ವರ್ಷ – 20.76 ಲಕ್ಷ ರೂ.
ಈ ವರ್ಷ – 27.98 ಲಕ್ಷ ರೂ.

ಕನಕಪುರದ ಕಬ್ಬಾಳಮ್ಮ
ಕಳೆದ ವರ್ಷ – 13.96 ಲಕ್ಷ ರೂ.
ಈ ವರ್ಷ – 19.64 ಲಕ್ಷ ರೂ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

6 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

12 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

20 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

23 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago