ಪರಿಸರಕ್ಕೆ ದಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ | ಅರಣ್ಯ ಇಲಾಖೆ, ಇಂಧನ ಸಚಿವರ ಸಮಾಲೋಚನೆ

August 14, 2024
9:34 AM

ವಯನಾಡ್‌(Wayanad), ಶಿರೂರು ಹಾಗೂ ಪಶ್ಚಿಮ ಘಟ್ಟಗಳ(Western Ghat) ಅನಾಹುತದ ನಂತರ ಸರ್ಕಾರ(Govt) ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿರ್ಧಾರ ಮಾಡಿದೆ. ಇದೀಗ ಅರಣ್ಯ(Forest) ಮತ್ತು ಪರಿಸರಕ್ಕೆ(Environment) ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ(Sharavathi pumped storage Project) ಅನುಷ್ಠಾನಗೊಳಿಸುವ ಸಂಬಂಧ ಇಂಧನ ಸಚಿವ ಕೆ.ಜೆ.ಜಾರ್ಜ್(K J George) ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ(Eshwar Khandre) ಅವರ ನೇತೃತ್ವದಲ್ಲಿ ಎರಡೂ ಇಲಾಖೆಗಳ ಉನ್ನತ ಅಧಿಕಾರಿಗಳ ಸಭೆ ನಡೆಸಲಾಯಿತು.

Advertisement
Advertisement

ಪ್ರಸ್ತುತ ಇರುವ ಶರಾವತಿ ಜಲ ವಿದ್ಯುತ್ ಯೋಜನೆ ವ್ಯಾಪ್ತಿಯ ಕಾರಿಡಾರ್ ನಲ್ಲೇ ಪಂಪ್ಡ್ ಸ್ಟೋರೇಜ್ ಯೋಜನೆ ಜೊತೆಗೆ ಬರೋದ್ರಿಂದ  ಅರಣ್ಯಕ್ಕೆ ಆಗುವ ಹಾನಿಯ ಪ್ರಮಾಣ ಕಡಿಮೆಯಾಗುತ್ತದೆ ಎಂದು ಸಚಿವ ಕೆ.ಜೆ.ಜಾರ್ಜ್ ಹಾಗೂ ಅವರೊಂದಿಗೆ ಇದ್ದ ಇಂಧನ ಇಲಾಖೆ ಅಧಿಕಾರಿಗಳು ಅರಣ್ಯ ಸಚಿವರಿಗೆ ಮಾಹಿತಿ ನೀಡಿದ್ರು. ಇದನ್ನು ಪರಿಗಣಿಸಿದ ಸಚಿವರು, ಕೇಂದ್ರದಿಂದ ಸೂಕ್ತ ಅನುಮತಿಗಳಿಗಾಗಿ ಒಂದು ತಿಂಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ,”ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯು, ಹಾಲಿ ವಿದ್ಯುತ್ ಉತ್ಪಾದನೆ ಮಾಡುವ ಜಲಾಶಯದಿಂದ ಹರಿಯುವ ನೀರನ್ನು ಮೋಟರ್ ಪಂಪ್ ಗಳ ಮೂಲಕ ಮೇಲಕ್ಕೆ ಹರಿಸಿ ಮತ್ತೆ ವಿದ್ಯುತ್ ಉತ್ಪಾದಿಯುವ ಯೋಜನೆಯಾಗಿದೆ. ಪರಿಸರ ಮತ್ತು ಅರಣ್ಯದ ಮೇಲೆ ಯಾವುದೇ ಗಂಭೀರ ಪರಿಣಾಮ ಉಂಟಾಗದಂತೆ ಸುಮಾರು 2 ಸಾವಿರ ಮೆಗಾವ್ಯಾಟ್ ನಷ್ಟು ಬೃಹತ್ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಹೀಗಾಗಿ ಅದಕ್ಕೆ ಸಂಬಂಧಿಸಿದ ಅಗತ್ಯ ಅನುಮತಿಗಳನ್ನು ನೀಡಲು ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು”, ಎಂದು ಅರಣ್ಯ ಸಚಿವರಲ್ಲಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೆ, ಸಂಬಂಧಿಸಿದ ಜಿಲ್ಲಾ ಅರಣ್ಯಾಧಿಕಾರಿಗಳಿಗೂ ಸೂಕ್ತ ಸಲಹೆಗಳನ್ನು ನೀಡಿ ವರದಿ ಕಳುಹಿಸುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಕೆಪಿಸಿಎಲ್ ಮತ್ತು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ
February 11, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror