Advertisement
MIRROR FOCUS

ಪರಿಸರಕ್ಕೆ ದಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ | ಅರಣ್ಯ ಇಲಾಖೆ, ಇಂಧನ ಸಚಿವರ ಸಮಾಲೋಚನೆ

Share

ವಯನಾಡ್‌(Wayanad), ಶಿರೂರು ಹಾಗೂ ಪಶ್ಚಿಮ ಘಟ್ಟಗಳ(Western Ghat) ಅನಾಹುತದ ನಂತರ ಸರ್ಕಾರ(Govt) ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿರ್ಧಾರ ಮಾಡಿದೆ. ಇದೀಗ ಅರಣ್ಯ(Forest) ಮತ್ತು ಪರಿಸರಕ್ಕೆ(Environment) ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ(Sharavathi pumped storage Project) ಅನುಷ್ಠಾನಗೊಳಿಸುವ ಸಂಬಂಧ ಇಂಧನ ಸಚಿವ ಕೆ.ಜೆ.ಜಾರ್ಜ್(K J George) ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ(Eshwar Khandre) ಅವರ ನೇತೃತ್ವದಲ್ಲಿ ಎರಡೂ ಇಲಾಖೆಗಳ ಉನ್ನತ ಅಧಿಕಾರಿಗಳ ಸಭೆ ನಡೆಸಲಾಯಿತು.

ಪ್ರಸ್ತುತ ಇರುವ ಶರಾವತಿ ಜಲ ವಿದ್ಯುತ್ ಯೋಜನೆ ವ್ಯಾಪ್ತಿಯ ಕಾರಿಡಾರ್ ನಲ್ಲೇ ಪಂಪ್ಡ್ ಸ್ಟೋರೇಜ್ ಯೋಜನೆ ಜೊತೆಗೆ ಬರೋದ್ರಿಂದ  ಅರಣ್ಯಕ್ಕೆ ಆಗುವ ಹಾನಿಯ ಪ್ರಮಾಣ ಕಡಿಮೆಯಾಗುತ್ತದೆ ಎಂದು ಸಚಿವ ಕೆ.ಜೆ.ಜಾರ್ಜ್ ಹಾಗೂ ಅವರೊಂದಿಗೆ ಇದ್ದ ಇಂಧನ ಇಲಾಖೆ ಅಧಿಕಾರಿಗಳು ಅರಣ್ಯ ಸಚಿವರಿಗೆ ಮಾಹಿತಿ ನೀಡಿದ್ರು. ಇದನ್ನು ಪರಿಗಣಿಸಿದ ಸಚಿವರು, ಕೇಂದ್ರದಿಂದ ಸೂಕ್ತ ಅನುಮತಿಗಳಿಗಾಗಿ ಒಂದು ತಿಂಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement

ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ,”ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯು, ಹಾಲಿ ವಿದ್ಯುತ್ ಉತ್ಪಾದನೆ ಮಾಡುವ ಜಲಾಶಯದಿಂದ ಹರಿಯುವ ನೀರನ್ನು ಮೋಟರ್ ಪಂಪ್ ಗಳ ಮೂಲಕ ಮೇಲಕ್ಕೆ ಹರಿಸಿ ಮತ್ತೆ ವಿದ್ಯುತ್ ಉತ್ಪಾದಿಯುವ ಯೋಜನೆಯಾಗಿದೆ. ಪರಿಸರ ಮತ್ತು ಅರಣ್ಯದ ಮೇಲೆ ಯಾವುದೇ ಗಂಭೀರ ಪರಿಣಾಮ ಉಂಟಾಗದಂತೆ ಸುಮಾರು 2 ಸಾವಿರ ಮೆಗಾವ್ಯಾಟ್ ನಷ್ಟು ಬೃಹತ್ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಹೀಗಾಗಿ ಅದಕ್ಕೆ ಸಂಬಂಧಿಸಿದ ಅಗತ್ಯ ಅನುಮತಿಗಳನ್ನು ನೀಡಲು ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು”, ಎಂದು ಅರಣ್ಯ ಸಚಿವರಲ್ಲಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೆ, ಸಂಬಂಧಿಸಿದ ಜಿಲ್ಲಾ ಅರಣ್ಯಾಧಿಕಾರಿಗಳಿಗೂ ಸೂಕ್ತ ಸಲಹೆಗಳನ್ನು ನೀಡಿ ವರದಿ ಕಳುಹಿಸುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಕೆಪಿಸಿಎಲ್ ಮತ್ತು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

21 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

24 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

24 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago