Advertisement
ಕಲೆ-ಸಂಸ್ಕೃತಿ

ಖ್ಯಾತ ಗಾಯಕ ಶಶಿಧರ ಕೋಟೆಯವರಿಗೆ ಪಲ್ಲವಿ ಪ್ರಶಸ್ತಿ ಪ್ರದಾನ

Share

ಸದ್ಗರು ಸಂಗೀತ ಪಾಠ ಶಾಲಾ ವತಿಯಿಂದ ಮಂಗಳೂರಿನ ಶ್ರೀಸುಬ್ರಹ್ಮಣ್ಯ ಸಭಾ ಸದನದಲ್ಲಿ ನಡೆದ  ಶ್ರೀ ಸೀತಾರಾಮ ಕಲ್ಯಾಣೋತ್ಸವ ಸಹಿತ ಸದ್ಗುರು ಶ್ರೀತ್ಯಾಗರಾಜ-ಪುರಂದರ ಉತ್ಸವದಲ್ಲಿ ಹಿರಿಯ ಸಂಗೀತ ವಿದ್ವಾಂಸ ವಿದ್ವಾನ್  ಮಧೂರು ಪಿ. ಬಾಲಸುಬ್ರಹ್ಮಣ್ಯಂ ಮತ್ತು ಖ್ಯಾತ ಗಾಯಕ ವಿದ್ವಾನ್ ಶಶಿಧರ ಕೋಟೆಯವರಿಗೆ ಪಲ್ಲವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶ್ರೀಸೀತಾರಾಮ ಕಲ್ಯಾಣೋತ್ಸವದ ಸಂಕಲ್ಪದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀರಾಮಸಂಕೀರ್ತನೆ ನಡೆಯಿತು. ಕಲ್ಯಾಣೋತ್ಸವದ ನಂತರ ಸಂಪ್ರದಾಯದಂತೆ ಶ್ರೀ ತ್ಯಾಗರಾಜರ ಪಂಚರತ್ನ ಕೀರ್ತನೆಗಳ ಗೋಷ್ಠಿಗಾಯನ ಜರಗಿತು. ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಹಿರಿಯ ಸಂಗೀತ ವಿದ್ವಾಂಸ ವಿದ್ವಾನ್  ಮಧೂರು ಪಿ. ಬಾಲಸುಬ್ರಹ್ಮಣ್ಯಂ ಮತ್ತು ಖ್ಯಾತ ಗಾಯಕ ವಿದ್ವಾನ್  ಶಶಿಧರ ಕೋಟೆಯವರಿಗೆ ಪಲ್ಲವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ  ಪ್ರದೀಪ ಕುಮಾರ ಕಲ್ಕೂರ, ಕರ್ಣಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್  ವಿನಯ್ ಭಟ್ ಪಿ. ಜೆ., ಹಿರಿಯ ಸಂಗೀತ ವಿದ್ವಾಂಸ ಗಾನಕೇಸರಿ ಕುದುಮಾರ್ ಎಸ್. ವೆಂಕಟ್ರಾಮನ್,  ಕೃಷಿಕ ಸುಬ್ರಹ್ಮಣ್ಯ ಭಟ್ ಕಾವಿನಮೂಲೆ ಹಾಗೂ ಸಂಸ್ಥೆಯ ನಿರ್ದೇಶಕ ವಿದ್ವಾನ್ ಗಣೇಶ್‍ರಾಜ್ ಯಂ. ವಿ. ಉಪಸ್ಥಿತರಿದ್ದರು.

ವಿದ್ವಾನ್ ಗಣೇಶ್‍ರಾಜ್ ಯಂ. ವಿ. ಸ್ವಾಗತಿಸಿ,  ಸತ್ಯನಾರಾಯಣ ಭಟ್ರಕೋಡಿ ಕಾರ್ಯಕ್ರಮ ನಿರ್ವಹಿಸಿದರು.

ಇದೇ ಸಂದರ್ಭದಲ್ಲಿ ಬಹುಮುಖ ಪ್ರತಿಭೆಗಳಾದ ಸಿರಿ ಶರ್ಮ, ಪ್ರಣವ್ ಕುಮಾರ್, ಕೃಷ್ಣ ಎಂ. ಎಸ್., ಗೌತಮಿ ಎಸ್. ಹಾಗೂ ದೀಕ್ಷಾ ಉಡುಪ ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

3 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago