Advertisement
ಕಲೆ-ಸಂಸ್ಕೃತಿ

ಖ್ಯಾತ ಗಾಯಕ ಶಶಿಧರ ಕೋಟೆಯವರಿಗೆ ಪಲ್ಲವಿ ಪ್ರಶಸ್ತಿ ಪ್ರದಾನ

Share

ಸದ್ಗರು ಸಂಗೀತ ಪಾಠ ಶಾಲಾ ವತಿಯಿಂದ ಮಂಗಳೂರಿನ ಶ್ರೀಸುಬ್ರಹ್ಮಣ್ಯ ಸಭಾ ಸದನದಲ್ಲಿ ನಡೆದ  ಶ್ರೀ ಸೀತಾರಾಮ ಕಲ್ಯಾಣೋತ್ಸವ ಸಹಿತ ಸದ್ಗುರು ಶ್ರೀತ್ಯಾಗರಾಜ-ಪುರಂದರ ಉತ್ಸವದಲ್ಲಿ ಹಿರಿಯ ಸಂಗೀತ ವಿದ್ವಾಂಸ ವಿದ್ವಾನ್  ಮಧೂರು ಪಿ. ಬಾಲಸುಬ್ರಹ್ಮಣ್ಯಂ ಮತ್ತು ಖ್ಯಾತ ಗಾಯಕ ವಿದ್ವಾನ್ ಶಶಿಧರ ಕೋಟೆಯವರಿಗೆ ಪಲ್ಲವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶ್ರೀಸೀತಾರಾಮ ಕಲ್ಯಾಣೋತ್ಸವದ ಸಂಕಲ್ಪದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀರಾಮಸಂಕೀರ್ತನೆ ನಡೆಯಿತು. ಕಲ್ಯಾಣೋತ್ಸವದ ನಂತರ ಸಂಪ್ರದಾಯದಂತೆ ಶ್ರೀ ತ್ಯಾಗರಾಜರ ಪಂಚರತ್ನ ಕೀರ್ತನೆಗಳ ಗೋಷ್ಠಿಗಾಯನ ಜರಗಿತು. ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಹಿರಿಯ ಸಂಗೀತ ವಿದ್ವಾಂಸ ವಿದ್ವಾನ್  ಮಧೂರು ಪಿ. ಬಾಲಸುಬ್ರಹ್ಮಣ್ಯಂ ಮತ್ತು ಖ್ಯಾತ ಗಾಯಕ ವಿದ್ವಾನ್  ಶಶಿಧರ ಕೋಟೆಯವರಿಗೆ ಪಲ್ಲವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ  ಪ್ರದೀಪ ಕುಮಾರ ಕಲ್ಕೂರ, ಕರ್ಣಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್  ವಿನಯ್ ಭಟ್ ಪಿ. ಜೆ., ಹಿರಿಯ ಸಂಗೀತ ವಿದ್ವಾಂಸ ಗಾನಕೇಸರಿ ಕುದುಮಾರ್ ಎಸ್. ವೆಂಕಟ್ರಾಮನ್,  ಕೃಷಿಕ ಸುಬ್ರಹ್ಮಣ್ಯ ಭಟ್ ಕಾವಿನಮೂಲೆ ಹಾಗೂ ಸಂಸ್ಥೆಯ ನಿರ್ದೇಶಕ ವಿದ್ವಾನ್ ಗಣೇಶ್‍ರಾಜ್ ಯಂ. ವಿ. ಉಪಸ್ಥಿತರಿದ್ದರು.

ವಿದ್ವಾನ್ ಗಣೇಶ್‍ರಾಜ್ ಯಂ. ವಿ. ಸ್ವಾಗತಿಸಿ,  ಸತ್ಯನಾರಾಯಣ ಭಟ್ರಕೋಡಿ ಕಾರ್ಯಕ್ರಮ ನಿರ್ವಹಿಸಿದರು.

ಇದೇ ಸಂದರ್ಭದಲ್ಲಿ ಬಹುಮುಖ ಪ್ರತಿಭೆಗಳಾದ ಸಿರಿ ಶರ್ಮ, ಪ್ರಣವ್ ಕುಮಾರ್, ಕೃಷ್ಣ ಎಂ. ಎಸ್., ಗೌತಮಿ ಎಸ್. ಹಾಗೂ ದೀಕ್ಷಾ ಉಡುಪ ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

3 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

9 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

18 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

18 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

20 hours ago