ಸದ್ಗರು ಸಂಗೀತ ಪಾಠ ಶಾಲಾ ವತಿಯಿಂದ ಮಂಗಳೂರಿನ ಶ್ರೀಸುಬ್ರಹ್ಮಣ್ಯ ಸಭಾ ಸದನದಲ್ಲಿ ನಡೆದ ಶ್ರೀ ಸೀತಾರಾಮ ಕಲ್ಯಾಣೋತ್ಸವ ಸಹಿತ ಸದ್ಗುರು ಶ್ರೀತ್ಯಾಗರಾಜ-ಪುರಂದರ ಉತ್ಸವದಲ್ಲಿ ಹಿರಿಯ ಸಂಗೀತ ವಿದ್ವಾಂಸ ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂ ಮತ್ತು ಖ್ಯಾತ ಗಾಯಕ ವಿದ್ವಾನ್ ಶಶಿಧರ ಕೋಟೆಯವರಿಗೆ ಪಲ್ಲವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀಸೀತಾರಾಮ ಕಲ್ಯಾಣೋತ್ಸವದ ಸಂಕಲ್ಪದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀರಾಮಸಂಕೀರ್ತನೆ ನಡೆಯಿತು. ಕಲ್ಯಾಣೋತ್ಸವದ ನಂತರ ಸಂಪ್ರದಾಯದಂತೆ ಶ್ರೀ ತ್ಯಾಗರಾಜರ ಪಂಚರತ್ನ ಕೀರ್ತನೆಗಳ ಗೋಷ್ಠಿಗಾಯನ ಜರಗಿತು. ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಹಿರಿಯ ಸಂಗೀತ ವಿದ್ವಾಂಸ ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂ ಮತ್ತು ಖ್ಯಾತ ಗಾಯಕ ವಿದ್ವಾನ್ ಶಶಿಧರ ಕೋಟೆಯವರಿಗೆ ಪಲ್ಲವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಕರ್ಣಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ವಿನಯ್ ಭಟ್ ಪಿ. ಜೆ., ಹಿರಿಯ ಸಂಗೀತ ವಿದ್ವಾಂಸ ಗಾನಕೇಸರಿ ಕುದುಮಾರ್ ಎಸ್. ವೆಂಕಟ್ರಾಮನ್, ಕೃಷಿಕ ಸುಬ್ರಹ್ಮಣ್ಯ ಭಟ್ ಕಾವಿನಮೂಲೆ ಹಾಗೂ ಸಂಸ್ಥೆಯ ನಿರ್ದೇಶಕ ವಿದ್ವಾನ್ ಗಣೇಶ್ರಾಜ್ ಯಂ. ವಿ. ಉಪಸ್ಥಿತರಿದ್ದರು.
ವಿದ್ವಾನ್ ಗಣೇಶ್ರಾಜ್ ಯಂ. ವಿ. ಸ್ವಾಗತಿಸಿ, ಸತ್ಯನಾರಾಯಣ ಭಟ್ರಕೋಡಿ ಕಾರ್ಯಕ್ರಮ ನಿರ್ವಹಿಸಿದರು.
ಇದೇ ಸಂದರ್ಭದಲ್ಲಿ ಬಹುಮುಖ ಪ್ರತಿಭೆಗಳಾದ ಸಿರಿ ಶರ್ಮ, ಪ್ರಣವ್ ಕುಮಾರ್, ಕೃಷ್ಣ ಎಂ. ಎಸ್., ಗೌತಮಿ ಎಸ್. ಹಾಗೂ ದೀಕ್ಷಾ ಉಡುಪ ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…