“ಶೇಣಿ ಗೋಪಾಲಕೃಷ್ಣ ಭಟ್ಟರು ಮರಣಿಸಿ ಹದಿನಾರು ವರುಷವಾಯಿತು. ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆಗೆ ಹೊಸ ತಿರುವನ್ನು ನೀಡಿದ ಕಲಾವಿದ. ಪುರಾಣದ ಪಾತ್ರಗಳು ಕೇವಲ ಆರಾಧನೆಗೆ ಇರುವಂತಹುದಲ್ಲ. ಆ ಪಾತ್ರಗಳಿಗೂ ಮನಸ್ಸಿದೆ. ವೈಚಾರಿಕತೆ ಇದೆ. ದ್ವಂದ್ವ ನಿಲುವುಗಳಿವೆ. ಶೇಣಿಯವರ ಮಾಗಧ, ರಾವಣ ಮುಂತಾದ ಖಳ ಪಾತ್ರಗಳ ಮನಸ್ಸುಗಳನ್ನು ಅರ್ಥಗಾರಿಕೆಯ ಮೂಲಕ ತೆರೆದಿಟ್ಟಿದ್ದಾರೆ ಶೇಣಿಯವರು. ಕಲಾವಿದ ಎನ್ನುವ ಪದಕ್ಕೆ ಗೌರವ ತಂದುಕೊಟ್ಟವರು. ಮಾತಿನ ಮಹತ್ತನ್ನು ತೋರಿಸಿಕೊಟ್ಟವರು. ಹೊಸ ತಲೆಮಾರಿಗೆ ಪರಿಚಯಿಸಲು ಚಿಕ್ಕ ಚಿಕ್ಕ ಪ್ರಕಟಣೆಗಳ ಮೂಲಕ ಶೇಣಿಯವರೂ ಸೇರಿದಂತೆ ಅಗಲಿದ ಕಲಾವಿದರ ಪುಸ್ತಿಕೆಯನ್ನು ಪ್ರಕಟಿಸುವ ಅನಿವಾರ್ಯತೆಯಿದೆ.” ಎಂದು ಕಲಾವಿದ, ಅಂಕಣಕಾರ ನಾ. ಕಾರಂತ ಪೆರಾಜೆ ಹೇಳಿದರು.
ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಇವರು ಹರಿಕಥಾ ಪರಿಷತ್ ಸಹಯೋಗದೊಂದಿಗೆ ನಡೆದ ಸಮಾರಂಭದಲ್ಲಿ ನಾ. ಕಾರಂತರು ಶೇಣಿಯವರ ಸಂಸ್ಮರಣೆ ಮಾಡಿದರು. “ಹರಿದಾಸ ಶೇಣಿ ಗೋಪಾಲಕೃಷ್ಣ ಭಟ್, ಹರಿದಾಸ ರಾಮದಾಸ ಸಾಮಗರಂತಹ ಅನೇಕ ಹಿರಿಯರು ಕಟ್ಟಿದ ಅರ್ಥಗಾರಿಕೆಯೆನ್ನುವ ಸೌಧದಲ್ಲಿ ನಾವೆಲ್ಲಾ ಕುಳಿತಿದ್ದೇವೆ. ತಾನು ಶೇಣಿಯವರ ಶಿಷ್ಯ, ಸಾಮಗರ ಶಿಷ್ಯ ಎಂದು ಅಭಿಮಾನದಿಂದ ಹೇಳಿಕೊಳ್ಳುತ್ತೇವೆ. ಅದು ಹೌದೇ ಎಂದು ನಮ್ಮನ್ನೇ ಪ್ರಶ್ನಿಸಿಕೊಂಡರೆ ನಮಗೆ ನಾಚಿಕೆಯಾಗಬೇಕು” ಎಂದರು. ವಿಮಾನ ನಿಲ್ದಾಣ ಪ್ರಾಧಿಕಾರದ ನಿವೃತ್ತ ನಿರ್ದೇಶಕ ಎಂ.ಆರ್.ವಾಸುದೇವ ಅವರು ಅಧ್ಯಕ್ಷತೆ ವಹಿಸಿ ಮನೆಮನೆಗೆ ಹರಿಕಥೆಯನ್ನು ತಲಪಿಸುವ ತಮ್ಮ ಯೋಜನೆಯನ್ನು ವಿವರಿಸಿದರು. ಚೇತನಾ ಆಸ್ಪತ್ರೆಯ ಡಾ.ಶ್ರೀಕಾಂತ ರಾವ್, ಕಾವು ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಯಕ್ಷರಂಗ ಪುತ್ತೂರಿನ ಅಧ್ಯಕ್ಷ ಕೆ.ಸೀತಾರಾಮ ಶಾಸ್ತ್ರಿ, ಸುಳ್ಯ ಶ್ರೀ ರಾಘವೇಂದ್ರ ಮಠದ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಜಿ, ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ರಾಮಕೃಷ್ಣ ರಾವ್ ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಟ್ರಸ್ಟಿನ ಗೌರವ ಸಲಹೆಗಾರ ಸಾಮೆತ್ತಡ್ಕ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು. ಟ್ರಸ್ಟಿನ ಪುತ್ತೂರು ಘಟಕದ ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ಪಿ.ವಿ.ರಾವ್ ವಂದಿಸಿದರು. ಕಲಾವಿದೆ ಶುಭಾ ಜೆ.ಸಿ.ಅಡಿಗ ನಿರ್ವಹಿಸಿದರು. ಕೊನೆಯಲ್ಲಿ ‘ಶ್ರೀರಾಮ ವನಗಮನ’ ಪ್ರಸಂಗದ ತಾಳಮದ್ದಳೆ ಜರುಗಿತು. ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಒಂದು ವಾರಗಳ ಕಾಲ ಜರುಗಿದ ಹರಿಕಥಾ ಸಪ್ತಾಹ ಸಂಪನ್ನವಾಗಿತ್ತು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…