Advertisement
ಸುದ್ದಿಗಳು

ಶೇಣಿ, ಸಾಮಗರಂತಹ ಹಿರಿಯರು ಕಟ್ಟಿದ ಮಾತಿನ ಸೌಧದಲ್ಲಿ ನಾವಿದ್ದೇವೆ ಎಂದು ಮರೆಯದಿರೋಣ | ಶೇಣಿ ಸಂಸ್ಮರಣೆಯಲ್ಲಿ ನಾ. ಕಾರಂತ ಪೆರಾಜೆ |

Share

“ಶೇಣಿ ಗೋಪಾಲಕೃಷ್ಣ ಭಟ್ಟರು ಮರಣಿಸಿ ಹದಿನಾರು ವರುಷವಾಯಿತು. ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆಗೆ ಹೊಸ ತಿರುವನ್ನು ನೀಡಿದ ಕಲಾವಿದ. ಪುರಾಣದ ಪಾತ್ರಗಳು ಕೇವಲ ಆರಾಧನೆಗೆ ಇರುವಂತಹುದಲ್ಲ. ಆ ಪಾತ್ರಗಳಿಗೂ ಮನಸ್ಸಿದೆ. ವೈಚಾರಿಕತೆ ಇದೆ. ದ್ವಂದ್ವ ನಿಲುವುಗಳಿವೆ. ಶೇಣಿಯವರ ಮಾಗಧ, ರಾವಣ ಮುಂತಾದ ಖಳ ಪಾತ್ರಗಳ ಮನಸ್ಸುಗಳನ್ನು ಅರ್ಥಗಾರಿಕೆಯ ಮೂಲಕ ತೆರೆದಿಟ್ಟಿದ್ದಾರೆ ಶೇಣಿಯವರು. ಕಲಾವಿದ ಎನ್ನುವ ಪದಕ್ಕೆ ಗೌರವ ತಂದುಕೊಟ್ಟವರು. ಮಾತಿನ ಮಹತ್ತನ್ನು ತೋರಿಸಿಕೊಟ್ಟವರು. ಹೊಸ ತಲೆಮಾರಿಗೆ ಪರಿಚಯಿಸಲು ಚಿಕ್ಕ ಚಿಕ್ಕ ಪ್ರಕಟಣೆಗಳ ಮೂಲಕ ಶೇಣಿಯವರೂ ಸೇರಿದಂತೆ ಅಗಲಿದ ಕಲಾವಿದರ ಪುಸ್ತಿಕೆಯನ್ನು ಪ್ರಕಟಿಸುವ ಅನಿವಾರ್ಯತೆಯಿದೆ.” ಎಂದು ಕಲಾವಿದ, ಅಂಕಣಕಾರ ನಾ. ಕಾರಂತ ಪೆರಾಜೆ ಹೇಳಿದರು.

ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಇವರು ಹರಿಕಥಾ ಪರಿಷತ್ ಸಹಯೋಗದೊಂದಿಗೆ ನಡೆದ ಸಮಾರಂಭದಲ್ಲಿ ನಾ. ಕಾರಂತರು ಶೇಣಿಯವರ ಸಂಸ್ಮರಣೆ ಮಾಡಿದರು. “ಹರಿದಾಸ ಶೇಣಿ ಗೋಪಾಲಕೃಷ್ಣ ಭಟ್, ಹರಿದಾಸ ರಾಮದಾಸ ಸಾಮಗರಂತಹ ಅನೇಕ ಹಿರಿಯರು ಕಟ್ಟಿದ ಅರ್ಥಗಾರಿಕೆಯೆನ್ನುವ ಸೌಧದಲ್ಲಿ ನಾವೆಲ್ಲಾ ಕುಳಿತಿದ್ದೇವೆ. ತಾನು ಶೇಣಿಯವರ ಶಿಷ್ಯ, ಸಾಮಗರ ಶಿಷ್ಯ ಎಂದು ಅಭಿಮಾನದಿಂದ ಹೇಳಿಕೊಳ್ಳುತ್ತೇವೆ. ಅದು ಹೌದೇ ಎಂದು ನಮ್ಮನ್ನೇ ಪ್ರಶ್ನಿಸಿಕೊಂಡರೆ ನಮಗೆ ನಾಚಿಕೆಯಾಗಬೇಕು” ಎಂದರು.
ವಿಮಾನ ನಿಲ್ದಾಣ ಪ್ರಾಧಿಕಾರದ ನಿವೃತ್ತ ನಿರ್ದೇಶಕ ಎಂ.ಆರ್.ವಾಸುದೇವ ಅವರು ಅಧ್ಯಕ್ಷತೆ ವಹಿಸಿ ಮನೆಮನೆಗೆ ಹರಿಕಥೆಯನ್ನು ತಲಪಿಸುವ ತಮ್ಮ ಯೋಜನೆಯನ್ನು ವಿವರಿಸಿದರು. ಚೇತನಾ ಆಸ್ಪತ್ರೆಯ ಡಾ.ಶ್ರೀಕಾಂತ ರಾವ್, ಕಾವು ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಯಕ್ಷರಂಗ ಪುತ್ತೂರಿನ ಅಧ್ಯಕ್ಷ ಕೆ.ಸೀತಾರಾಮ ಶಾಸ್ತ್ರಿ, ಸುಳ್ಯ ಶ್ರೀ ರಾಘವೇಂದ್ರ ಮಠದ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಜಿ, ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ರಾಮಕೃಷ್ಣ ರಾವ್ ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಟ್ರಸ್ಟಿನ ಗೌರವ ಸಲಹೆಗಾರ ಸಾಮೆತ್ತಡ್ಕ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.
ಟ್ರಸ್ಟಿನ ಪುತ್ತೂರು ಘಟಕದ ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ಪಿ.ವಿ.ರಾವ್ ವಂದಿಸಿದರು. ಕಲಾವಿದೆ  ಶುಭಾ ಜೆ.ಸಿ.ಅಡಿಗ ನಿರ್ವಹಿಸಿದರು. ಕೊನೆಯಲ್ಲಿ ‘ಶ್ರೀರಾಮ ವನಗಮನ’ ಪ್ರಸಂಗದ ತಾಳಮದ್ದಳೆ ಜರುಗಿತು. ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಒಂದು ವಾರಗಳ ಕಾಲ ಜರುಗಿದ ಹರಿಕಥಾ ಸಪ್ತಾಹ ಸಂಪನ್ನವಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

24 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago