Advertisement
ಸುದ್ದಿಗಳು

ಶೇಣಿ, ಸಾಮಗರಂತಹ ಹಿರಿಯರು ಕಟ್ಟಿದ ಮಾತಿನ ಸೌಧದಲ್ಲಿ ನಾವಿದ್ದೇವೆ ಎಂದು ಮರೆಯದಿರೋಣ | ಶೇಣಿ ಸಂಸ್ಮರಣೆಯಲ್ಲಿ ನಾ. ಕಾರಂತ ಪೆರಾಜೆ |

Share

“ಶೇಣಿ ಗೋಪಾಲಕೃಷ್ಣ ಭಟ್ಟರು ಮರಣಿಸಿ ಹದಿನಾರು ವರುಷವಾಯಿತು. ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆಗೆ ಹೊಸ ತಿರುವನ್ನು ನೀಡಿದ ಕಲಾವಿದ. ಪುರಾಣದ ಪಾತ್ರಗಳು ಕೇವಲ ಆರಾಧನೆಗೆ ಇರುವಂತಹುದಲ್ಲ. ಆ ಪಾತ್ರಗಳಿಗೂ ಮನಸ್ಸಿದೆ. ವೈಚಾರಿಕತೆ ಇದೆ. ದ್ವಂದ್ವ ನಿಲುವುಗಳಿವೆ. ಶೇಣಿಯವರ ಮಾಗಧ, ರಾವಣ ಮುಂತಾದ ಖಳ ಪಾತ್ರಗಳ ಮನಸ್ಸುಗಳನ್ನು ಅರ್ಥಗಾರಿಕೆಯ ಮೂಲಕ ತೆರೆದಿಟ್ಟಿದ್ದಾರೆ ಶೇಣಿಯವರು. ಕಲಾವಿದ ಎನ್ನುವ ಪದಕ್ಕೆ ಗೌರವ ತಂದುಕೊಟ್ಟವರು. ಮಾತಿನ ಮಹತ್ತನ್ನು ತೋರಿಸಿಕೊಟ್ಟವರು. ಹೊಸ ತಲೆಮಾರಿಗೆ ಪರಿಚಯಿಸಲು ಚಿಕ್ಕ ಚಿಕ್ಕ ಪ್ರಕಟಣೆಗಳ ಮೂಲಕ ಶೇಣಿಯವರೂ ಸೇರಿದಂತೆ ಅಗಲಿದ ಕಲಾವಿದರ ಪುಸ್ತಿಕೆಯನ್ನು ಪ್ರಕಟಿಸುವ ಅನಿವಾರ್ಯತೆಯಿದೆ.” ಎಂದು ಕಲಾವಿದ, ಅಂಕಣಕಾರ ನಾ. ಕಾರಂತ ಪೆರಾಜೆ ಹೇಳಿದರು.

ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಇವರು ಹರಿಕಥಾ ಪರಿಷತ್ ಸಹಯೋಗದೊಂದಿಗೆ ನಡೆದ ಸಮಾರಂಭದಲ್ಲಿ ನಾ. ಕಾರಂತರು ಶೇಣಿಯವರ ಸಂಸ್ಮರಣೆ ಮಾಡಿದರು. “ಹರಿದಾಸ ಶೇಣಿ ಗೋಪಾಲಕೃಷ್ಣ ಭಟ್, ಹರಿದಾಸ ರಾಮದಾಸ ಸಾಮಗರಂತಹ ಅನೇಕ ಹಿರಿಯರು ಕಟ್ಟಿದ ಅರ್ಥಗಾರಿಕೆಯೆನ್ನುವ ಸೌಧದಲ್ಲಿ ನಾವೆಲ್ಲಾ ಕುಳಿತಿದ್ದೇವೆ. ತಾನು ಶೇಣಿಯವರ ಶಿಷ್ಯ, ಸಾಮಗರ ಶಿಷ್ಯ ಎಂದು ಅಭಿಮಾನದಿಂದ ಹೇಳಿಕೊಳ್ಳುತ್ತೇವೆ. ಅದು ಹೌದೇ ಎಂದು ನಮ್ಮನ್ನೇ ಪ್ರಶ್ನಿಸಿಕೊಂಡರೆ ನಮಗೆ ನಾಚಿಕೆಯಾಗಬೇಕು” ಎಂದರು.
ವಿಮಾನ ನಿಲ್ದಾಣ ಪ್ರಾಧಿಕಾರದ ನಿವೃತ್ತ ನಿರ್ದೇಶಕ ಎಂ.ಆರ್.ವಾಸುದೇವ ಅವರು ಅಧ್ಯಕ್ಷತೆ ವಹಿಸಿ ಮನೆಮನೆಗೆ ಹರಿಕಥೆಯನ್ನು ತಲಪಿಸುವ ತಮ್ಮ ಯೋಜನೆಯನ್ನು ವಿವರಿಸಿದರು. ಚೇತನಾ ಆಸ್ಪತ್ರೆಯ ಡಾ.ಶ್ರೀಕಾಂತ ರಾವ್, ಕಾವು ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಯಕ್ಷರಂಗ ಪುತ್ತೂರಿನ ಅಧ್ಯಕ್ಷ ಕೆ.ಸೀತಾರಾಮ ಶಾಸ್ತ್ರಿ, ಸುಳ್ಯ ಶ್ರೀ ರಾಘವೇಂದ್ರ ಮಠದ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಜಿ, ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ರಾಮಕೃಷ್ಣ ರಾವ್ ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಟ್ರಸ್ಟಿನ ಗೌರವ ಸಲಹೆಗಾರ ಸಾಮೆತ್ತಡ್ಕ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.
ಟ್ರಸ್ಟಿನ ಪುತ್ತೂರು ಘಟಕದ ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ಪಿ.ವಿ.ರಾವ್ ವಂದಿಸಿದರು. ಕಲಾವಿದೆ  ಶುಭಾ ಜೆ.ಸಿ.ಅಡಿಗ ನಿರ್ವಹಿಸಿದರು. ಕೊನೆಯಲ್ಲಿ ‘ಶ್ರೀರಾಮ ವನಗಮನ’ ಪ್ರಸಂಗದ ತಾಳಮದ್ದಳೆ ಜರುಗಿತು. ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಒಂದು ವಾರಗಳ ಕಾಲ ಜರುಗಿದ ಹರಿಕಥಾ ಸಪ್ತಾಹ ಸಂಪನ್ನವಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

3 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

3 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

5 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

8 hours ago