ಶಿರಾಡಿ ಘಾಟ್‌ ಸುರಂಗ ಬೈಪಾಸ್ ನಿರ್ಮಾಣಕ್ಕೆ ಪ್ರಯತ್ನ | 10,146 ಕೋಟಿ ರೂಪಾಯಿಯ ಪ್ರಾಜೆಕ್ಟ್‌ ಇದು |

September 17, 2021
11:44 AM

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ ರಸ್ತೆಯಲ್ಲಿ ಸುಲಲಿತ ವಾಹನ ಸಂಚಾರಕ್ಕಾಗಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ಕೋರಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಕೇಂದ್ರ ಸರಕಾರವನ್ನು ಮನವಿ ಮಾಡಿದ್ದಾರೆ. ಈಚೆಗೆ ಬೊಮ್ಮಾಯಿ ಅವರು ದೆಹಲಿ ಭೇಟಿಯ ವೇಳೆ  ಕೇಂದ್ರ ಸಚಿವರನ್ನು ಭೇಟಿಯಾದ ಸಂದರ್ಭ ಮನವಿ ಮಾಡಿದ್ದಾರೆ.

Advertisement

ಜಪಾನ್ ಸರ್ಕಾರದ ಸಹಯೋಗದೊಂದಿಗೆ ಬಂದರು ನಗರ ಮಂಗಳೂರು ಮತ್ತು ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾದ ಶಿರಾಡಿ ಘಾಟ್ ವಿಭಾಗದ ಸುರಂಗ ಬೈಪಾಸ್ ನಿರ್ಮಾಣಕ್ಕೆ ಸಿಎಂ ಅನುಮೋದನೆ ಕೋರಿದ್ದಾರೆ. ಈ ಯೋಜನೆಯ ಬಂಡವಾಳ ವೆಚ್ಚ ಸುಮಾರು 10,146 ಕೋಟಿ ರೂಪಾಯಿ ಆಗಿದೆ. ಹಲವು ವರ್ಷಗಳಿಂದ ಈ ಯೋಜನೆಯ ಪ್ರಸ್ತಾಪ ಇದೆ. ಪರಿಸರದ ಮೇಲೆ ಯಾವುದೇ ಹಾನಿಯಾಗದಂತೆ ಜಪಾನ್‌ ಮಾದರಿಯಲ್ಲಿ ಈ ಯೋಜನೆ ಅನುಷ್ಟಾನದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗಿನ ಸಭೆ ಬಳಿಕ ಮಾತನಾಡಿದ ಸಿಎಂ, ಭೂಸ್ವಾಧೀನ ಮತ್ತು ಇತರ ಸಮಸ್ಯೆಗಳಿಂದಾಗಿ ಬಾಕಿಯಾದ ಯೋಜನೆಗಳ ಬಗ್ಗೆ ರಾಜ್ಯಕ್ಕೆ ಕಾಳಜಿ ಇದೆ,  ಈ ಯೋಜನೆಗಳ ಕಡೆಗೂ ಗಮನಹರಿಸಲಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಭೂಸ್ವಾಧೀನಕ್ಕೆ ಶೇಕಡಾ 30 ರಷ್ಟು ವೆಚ್ಚವನ್ನು ಭರಿಸಲು ನಿರ್ಧರಿಸಿದೆ ಮತ್ತು ರಸ್ತೆ ನಿರ್ಮಾಣ ಸಾಮಗ್ರಿಗಳ ಮೇಲೆ ವಿಶೇಷವಾಗಿ ಸ್ಟೀಲ್, ಸಿಮೆಂಟ್, ಮರಳು ಮತ್ತು ಒಟ್ಟು ಮೊತ್ತದ ಮೇಲೆ ರಾಜ್ಯ ಜಿಎಸ್‌ಟಿ ವಿನಾಯಿತಿಗಾಗಿ ಸುಮಾರು 1,000 ಕೋಟಿ ರೂ ನಿಗದಿ ಪಡಿಸುವ ಯೋಜನೆ ಹೊಂದಿದೆ ಎಂದಿದ್ದಾರೆ.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ
July 9, 2025
9:19 PM
by: The Rural Mirror ಸುದ್ದಿಜಾಲ
ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ
July 9, 2025
9:16 PM
by: The Rural Mirror ಸುದ್ದಿಜಾಲ
ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ
July 9, 2025
9:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group