ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಸುಲಲಿತ ವಾಹನ ಸಂಚಾರಕ್ಕಾಗಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ಕೋರಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೇಂದ್ರ ಸರಕಾರವನ್ನು ಮನವಿ ಮಾಡಿದ್ದಾರೆ. ಈಚೆಗೆ ಬೊಮ್ಮಾಯಿ ಅವರು ದೆಹಲಿ ಭೇಟಿಯ ವೇಳೆ ಕೇಂದ್ರ ಸಚಿವರನ್ನು ಭೇಟಿಯಾದ ಸಂದರ್ಭ ಮನವಿ ಮಾಡಿದ್ದಾರೆ.
ಜಪಾನ್ ಸರ್ಕಾರದ ಸಹಯೋಗದೊಂದಿಗೆ ಬಂದರು ನಗರ ಮಂಗಳೂರು ಮತ್ತು ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾದ ಶಿರಾಡಿ ಘಾಟ್ ವಿಭಾಗದ ಸುರಂಗ ಬೈಪಾಸ್ ನಿರ್ಮಾಣಕ್ಕೆ ಸಿಎಂ ಅನುಮೋದನೆ ಕೋರಿದ್ದಾರೆ. ಈ ಯೋಜನೆಯ ಬಂಡವಾಳ ವೆಚ್ಚ ಸುಮಾರು 10,146 ಕೋಟಿ ರೂಪಾಯಿ ಆಗಿದೆ. ಹಲವು ವರ್ಷಗಳಿಂದ ಈ ಯೋಜನೆಯ ಪ್ರಸ್ತಾಪ ಇದೆ. ಪರಿಸರದ ಮೇಲೆ ಯಾವುದೇ ಹಾನಿಯಾಗದಂತೆ ಜಪಾನ್ ಮಾದರಿಯಲ್ಲಿ ಈ ಯೋಜನೆ ಅನುಷ್ಟಾನದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗಿನ ಸಭೆ ಬಳಿಕ ಮಾತನಾಡಿದ ಸಿಎಂ, ಭೂಸ್ವಾಧೀನ ಮತ್ತು ಇತರ ಸಮಸ್ಯೆಗಳಿಂದಾಗಿ ಬಾಕಿಯಾದ ಯೋಜನೆಗಳ ಬಗ್ಗೆ ರಾಜ್ಯಕ್ಕೆ ಕಾಳಜಿ ಇದೆ, ಈ ಯೋಜನೆಗಳ ಕಡೆಗೂ ಗಮನಹರಿಸಲಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಭೂಸ್ವಾಧೀನಕ್ಕೆ ಶೇಕಡಾ 30 ರಷ್ಟು ವೆಚ್ಚವನ್ನು ಭರಿಸಲು ನಿರ್ಧರಿಸಿದೆ ಮತ್ತು ರಸ್ತೆ ನಿರ್ಮಾಣ ಸಾಮಗ್ರಿಗಳ ಮೇಲೆ ವಿಶೇಷವಾಗಿ ಸ್ಟೀಲ್, ಸಿಮೆಂಟ್, ಮರಳು ಮತ್ತು ಒಟ್ಟು ಮೊತ್ತದ ಮೇಲೆ ರಾಜ್ಯ ಜಿಎಸ್ಟಿ ವಿನಾಯಿತಿಗಾಗಿ ಸುಮಾರು 1,000 ಕೋಟಿ ರೂ ನಿಗದಿ ಪಡಿಸುವ ಯೋಜನೆ ಹೊಂದಿದೆ ಎಂದಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…