Advertisement
ರಾಜ್ಯ

ಶಿರಾಡಿ ಘಾಟ್‌ ಸುರಂಗ ಬೈಪಾಸ್ ನಿರ್ಮಾಣಕ್ಕೆ ಪ್ರಯತ್ನ | 10,146 ಕೋಟಿ ರೂಪಾಯಿಯ ಪ್ರಾಜೆಕ್ಟ್‌ ಇದು |

Share

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ ರಸ್ತೆಯಲ್ಲಿ ಸುಲಲಿತ ವಾಹನ ಸಂಚಾರಕ್ಕಾಗಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ಕೋರಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಕೇಂದ್ರ ಸರಕಾರವನ್ನು ಮನವಿ ಮಾಡಿದ್ದಾರೆ. ಈಚೆಗೆ ಬೊಮ್ಮಾಯಿ ಅವರು ದೆಹಲಿ ಭೇಟಿಯ ವೇಳೆ  ಕೇಂದ್ರ ಸಚಿವರನ್ನು ಭೇಟಿಯಾದ ಸಂದರ್ಭ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement

ಜಪಾನ್ ಸರ್ಕಾರದ ಸಹಯೋಗದೊಂದಿಗೆ ಬಂದರು ನಗರ ಮಂಗಳೂರು ಮತ್ತು ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾದ ಶಿರಾಡಿ ಘಾಟ್ ವಿಭಾಗದ ಸುರಂಗ ಬೈಪಾಸ್ ನಿರ್ಮಾಣಕ್ಕೆ ಸಿಎಂ ಅನುಮೋದನೆ ಕೋರಿದ್ದಾರೆ. ಈ ಯೋಜನೆಯ ಬಂಡವಾಳ ವೆಚ್ಚ ಸುಮಾರು 10,146 ಕೋಟಿ ರೂಪಾಯಿ ಆಗಿದೆ. ಹಲವು ವರ್ಷಗಳಿಂದ ಈ ಯೋಜನೆಯ ಪ್ರಸ್ತಾಪ ಇದೆ. ಪರಿಸರದ ಮೇಲೆ ಯಾವುದೇ ಹಾನಿಯಾಗದಂತೆ ಜಪಾನ್‌ ಮಾದರಿಯಲ್ಲಿ ಈ ಯೋಜನೆ ಅನುಷ್ಟಾನದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

Advertisement

ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗಿನ ಸಭೆ ಬಳಿಕ ಮಾತನಾಡಿದ ಸಿಎಂ, ಭೂಸ್ವಾಧೀನ ಮತ್ತು ಇತರ ಸಮಸ್ಯೆಗಳಿಂದಾಗಿ ಬಾಕಿಯಾದ ಯೋಜನೆಗಳ ಬಗ್ಗೆ ರಾಜ್ಯಕ್ಕೆ ಕಾಳಜಿ ಇದೆ,  ಈ ಯೋಜನೆಗಳ ಕಡೆಗೂ ಗಮನಹರಿಸಲಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಭೂಸ್ವಾಧೀನಕ್ಕೆ ಶೇಕಡಾ 30 ರಷ್ಟು ವೆಚ್ಚವನ್ನು ಭರಿಸಲು ನಿರ್ಧರಿಸಿದೆ ಮತ್ತು ರಸ್ತೆ ನಿರ್ಮಾಣ ಸಾಮಗ್ರಿಗಳ ಮೇಲೆ ವಿಶೇಷವಾಗಿ ಸ್ಟೀಲ್, ಸಿಮೆಂಟ್, ಮರಳು ಮತ್ತು ಒಟ್ಟು ಮೊತ್ತದ ಮೇಲೆ ರಾಜ್ಯ ಜಿಎಸ್‌ಟಿ ವಿನಾಯಿತಿಗಾಗಿ ಸುಮಾರು 1,000 ಕೋಟಿ ರೂ ನಿಗದಿ ಪಡಿಸುವ ಯೋಜನೆ ಹೊಂದಿದೆ ಎಂದಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

5 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago