ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಸುಲಲಿತ ವಾಹನ ಸಂಚಾರಕ್ಕಾಗಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ಕೋರಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೇಂದ್ರ ಸರಕಾರವನ್ನು ಮನವಿ ಮಾಡಿದ್ದಾರೆ. ಈಚೆಗೆ ಬೊಮ್ಮಾಯಿ ಅವರು ದೆಹಲಿ ಭೇಟಿಯ ವೇಳೆ ಕೇಂದ್ರ ಸಚಿವರನ್ನು ಭೇಟಿಯಾದ ಸಂದರ್ಭ ಮನವಿ ಮಾಡಿದ್ದಾರೆ.
ಜಪಾನ್ ಸರ್ಕಾರದ ಸಹಯೋಗದೊಂದಿಗೆ ಬಂದರು ನಗರ ಮಂಗಳೂರು ಮತ್ತು ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾದ ಶಿರಾಡಿ ಘಾಟ್ ವಿಭಾಗದ ಸುರಂಗ ಬೈಪಾಸ್ ನಿರ್ಮಾಣಕ್ಕೆ ಸಿಎಂ ಅನುಮೋದನೆ ಕೋರಿದ್ದಾರೆ. ಈ ಯೋಜನೆಯ ಬಂಡವಾಳ ವೆಚ್ಚ ಸುಮಾರು 10,146 ಕೋಟಿ ರೂಪಾಯಿ ಆಗಿದೆ. ಹಲವು ವರ್ಷಗಳಿಂದ ಈ ಯೋಜನೆಯ ಪ್ರಸ್ತಾಪ ಇದೆ. ಪರಿಸರದ ಮೇಲೆ ಯಾವುದೇ ಹಾನಿಯಾಗದಂತೆ ಜಪಾನ್ ಮಾದರಿಯಲ್ಲಿ ಈ ಯೋಜನೆ ಅನುಷ್ಟಾನದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗಿನ ಸಭೆ ಬಳಿಕ ಮಾತನಾಡಿದ ಸಿಎಂ, ಭೂಸ್ವಾಧೀನ ಮತ್ತು ಇತರ ಸಮಸ್ಯೆಗಳಿಂದಾಗಿ ಬಾಕಿಯಾದ ಯೋಜನೆಗಳ ಬಗ್ಗೆ ರಾಜ್ಯಕ್ಕೆ ಕಾಳಜಿ ಇದೆ, ಈ ಯೋಜನೆಗಳ ಕಡೆಗೂ ಗಮನಹರಿಸಲಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಭೂಸ್ವಾಧೀನಕ್ಕೆ ಶೇಕಡಾ 30 ರಷ್ಟು ವೆಚ್ಚವನ್ನು ಭರಿಸಲು ನಿರ್ಧರಿಸಿದೆ ಮತ್ತು ರಸ್ತೆ ನಿರ್ಮಾಣ ಸಾಮಗ್ರಿಗಳ ಮೇಲೆ ವಿಶೇಷವಾಗಿ ಸ್ಟೀಲ್, ಸಿಮೆಂಟ್, ಮರಳು ಮತ್ತು ಒಟ್ಟು ಮೊತ್ತದ ಮೇಲೆ ರಾಜ್ಯ ಜಿಎಸ್ಟಿ ವಿನಾಯಿತಿಗಾಗಿ ಸುಮಾರು 1,000 ಕೋಟಿ ರೂ ನಿಗದಿ ಪಡಿಸುವ ಯೋಜನೆ ಹೊಂದಿದೆ ಎಂದಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…