ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಸುಲಲಿತ ವಾಹನ ಸಂಚಾರಕ್ಕಾಗಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ಕೋರಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೇಂದ್ರ ಸರಕಾರವನ್ನು ಮನವಿ ಮಾಡಿದ್ದಾರೆ. ಈಚೆಗೆ ಬೊಮ್ಮಾಯಿ ಅವರು ದೆಹಲಿ ಭೇಟಿಯ ವೇಳೆ ಕೇಂದ್ರ ಸಚಿವರನ್ನು ಭೇಟಿಯಾದ ಸಂದರ್ಭ ಮನವಿ ಮಾಡಿದ್ದಾರೆ.
ಜಪಾನ್ ಸರ್ಕಾರದ ಸಹಯೋಗದೊಂದಿಗೆ ಬಂದರು ನಗರ ಮಂಗಳೂರು ಮತ್ತು ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾದ ಶಿರಾಡಿ ಘಾಟ್ ವಿಭಾಗದ ಸುರಂಗ ಬೈಪಾಸ್ ನಿರ್ಮಾಣಕ್ಕೆ ಸಿಎಂ ಅನುಮೋದನೆ ಕೋರಿದ್ದಾರೆ. ಈ ಯೋಜನೆಯ ಬಂಡವಾಳ ವೆಚ್ಚ ಸುಮಾರು 10,146 ಕೋಟಿ ರೂಪಾಯಿ ಆಗಿದೆ. ಹಲವು ವರ್ಷಗಳಿಂದ ಈ ಯೋಜನೆಯ ಪ್ರಸ್ತಾಪ ಇದೆ. ಪರಿಸರದ ಮೇಲೆ ಯಾವುದೇ ಹಾನಿಯಾಗದಂತೆ ಜಪಾನ್ ಮಾದರಿಯಲ್ಲಿ ಈ ಯೋಜನೆ ಅನುಷ್ಟಾನದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗಿನ ಸಭೆ ಬಳಿಕ ಮಾತನಾಡಿದ ಸಿಎಂ, ಭೂಸ್ವಾಧೀನ ಮತ್ತು ಇತರ ಸಮಸ್ಯೆಗಳಿಂದಾಗಿ ಬಾಕಿಯಾದ ಯೋಜನೆಗಳ ಬಗ್ಗೆ ರಾಜ್ಯಕ್ಕೆ ಕಾಳಜಿ ಇದೆ, ಈ ಯೋಜನೆಗಳ ಕಡೆಗೂ ಗಮನಹರಿಸಲಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಭೂಸ್ವಾಧೀನಕ್ಕೆ ಶೇಕಡಾ 30 ರಷ್ಟು ವೆಚ್ಚವನ್ನು ಭರಿಸಲು ನಿರ್ಧರಿಸಿದೆ ಮತ್ತು ರಸ್ತೆ ನಿರ್ಮಾಣ ಸಾಮಗ್ರಿಗಳ ಮೇಲೆ ವಿಶೇಷವಾಗಿ ಸ್ಟೀಲ್, ಸಿಮೆಂಟ್, ಮರಳು ಮತ್ತು ಒಟ್ಟು ಮೊತ್ತದ ಮೇಲೆ ರಾಜ್ಯ ಜಿಎಸ್ಟಿ ವಿನಾಯಿತಿಗಾಗಿ ಸುಮಾರು 1,000 ಕೋಟಿ ರೂ ನಿಗದಿ ಪಡಿಸುವ ಯೋಜನೆ ಹೊಂದಿದೆ ಎಂದಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…