Advertisement
ರಾಜ್ಯ

ಶಿರಾಡಿ ಘಾಟ್‌ ಸುರಂಗ ಬೈಪಾಸ್ ನಿರ್ಮಾಣಕ್ಕೆ ಪ್ರಯತ್ನ | 10,146 ಕೋಟಿ ರೂಪಾಯಿಯ ಪ್ರಾಜೆಕ್ಟ್‌ ಇದು |

Share

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ ರಸ್ತೆಯಲ್ಲಿ ಸುಲಲಿತ ವಾಹನ ಸಂಚಾರಕ್ಕಾಗಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ಕೋರಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಕೇಂದ್ರ ಸರಕಾರವನ್ನು ಮನವಿ ಮಾಡಿದ್ದಾರೆ. ಈಚೆಗೆ ಬೊಮ್ಮಾಯಿ ಅವರು ದೆಹಲಿ ಭೇಟಿಯ ವೇಳೆ  ಕೇಂದ್ರ ಸಚಿವರನ್ನು ಭೇಟಿಯಾದ ಸಂದರ್ಭ ಮನವಿ ಮಾಡಿದ್ದಾರೆ.

ಜಪಾನ್ ಸರ್ಕಾರದ ಸಹಯೋಗದೊಂದಿಗೆ ಬಂದರು ನಗರ ಮಂಗಳೂರು ಮತ್ತು ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾದ ಶಿರಾಡಿ ಘಾಟ್ ವಿಭಾಗದ ಸುರಂಗ ಬೈಪಾಸ್ ನಿರ್ಮಾಣಕ್ಕೆ ಸಿಎಂ ಅನುಮೋದನೆ ಕೋರಿದ್ದಾರೆ. ಈ ಯೋಜನೆಯ ಬಂಡವಾಳ ವೆಚ್ಚ ಸುಮಾರು 10,146 ಕೋಟಿ ರೂಪಾಯಿ ಆಗಿದೆ. ಹಲವು ವರ್ಷಗಳಿಂದ ಈ ಯೋಜನೆಯ ಪ್ರಸ್ತಾಪ ಇದೆ. ಪರಿಸರದ ಮೇಲೆ ಯಾವುದೇ ಹಾನಿಯಾಗದಂತೆ ಜಪಾನ್‌ ಮಾದರಿಯಲ್ಲಿ ಈ ಯೋಜನೆ ಅನುಷ್ಟಾನದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗಿನ ಸಭೆ ಬಳಿಕ ಮಾತನಾಡಿದ ಸಿಎಂ, ಭೂಸ್ವಾಧೀನ ಮತ್ತು ಇತರ ಸಮಸ್ಯೆಗಳಿಂದಾಗಿ ಬಾಕಿಯಾದ ಯೋಜನೆಗಳ ಬಗ್ಗೆ ರಾಜ್ಯಕ್ಕೆ ಕಾಳಜಿ ಇದೆ,  ಈ ಯೋಜನೆಗಳ ಕಡೆಗೂ ಗಮನಹರಿಸಲಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಭೂಸ್ವಾಧೀನಕ್ಕೆ ಶೇಕಡಾ 30 ರಷ್ಟು ವೆಚ್ಚವನ್ನು ಭರಿಸಲು ನಿರ್ಧರಿಸಿದೆ ಮತ್ತು ರಸ್ತೆ ನಿರ್ಮಾಣ ಸಾಮಗ್ರಿಗಳ ಮೇಲೆ ವಿಶೇಷವಾಗಿ ಸ್ಟೀಲ್, ಸಿಮೆಂಟ್, ಮರಳು ಮತ್ತು ಒಟ್ಟು ಮೊತ್ತದ ಮೇಲೆ ರಾಜ್ಯ ಜಿಎಸ್‌ಟಿ ವಿನಾಯಿತಿಗಾಗಿ ಸುಮಾರು 1,000 ಕೋಟಿ ರೂ ನಿಗದಿ ಪಡಿಸುವ ಯೋಜನೆ ಹೊಂದಿದೆ ಎಂದಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

58 minutes ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

1 hour ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

2 hours ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

2 hours ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

2 hours ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

11 hours ago