ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಸುಲಲಿತ ವಾಹನ ಸಂಚಾರಕ್ಕಾಗಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ಕೋರಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೇಂದ್ರ ಸರಕಾರವನ್ನು ಮನವಿ ಮಾಡಿದ್ದಾರೆ. ಈಚೆಗೆ ಬೊಮ್ಮಾಯಿ ಅವರು ದೆಹಲಿ ಭೇಟಿಯ ವೇಳೆ ಕೇಂದ್ರ ಸಚಿವರನ್ನು ಭೇಟಿಯಾದ ಸಂದರ್ಭ ಮನವಿ ಮಾಡಿದ್ದಾರೆ.
ಜಪಾನ್ ಸರ್ಕಾರದ ಸಹಯೋಗದೊಂದಿಗೆ ಬಂದರು ನಗರ ಮಂಗಳೂರು ಮತ್ತು ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾದ ಶಿರಾಡಿ ಘಾಟ್ ವಿಭಾಗದ ಸುರಂಗ ಬೈಪಾಸ್ ನಿರ್ಮಾಣಕ್ಕೆ ಸಿಎಂ ಅನುಮೋದನೆ ಕೋರಿದ್ದಾರೆ. ಈ ಯೋಜನೆಯ ಬಂಡವಾಳ ವೆಚ್ಚ ಸುಮಾರು 10,146 ಕೋಟಿ ರೂಪಾಯಿ ಆಗಿದೆ. ಹಲವು ವರ್ಷಗಳಿಂದ ಈ ಯೋಜನೆಯ ಪ್ರಸ್ತಾಪ ಇದೆ. ಪರಿಸರದ ಮೇಲೆ ಯಾವುದೇ ಹಾನಿಯಾಗದಂತೆ ಜಪಾನ್ ಮಾದರಿಯಲ್ಲಿ ಈ ಯೋಜನೆ ಅನುಷ್ಟಾನದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗಿನ ಸಭೆ ಬಳಿಕ ಮಾತನಾಡಿದ ಸಿಎಂ, ಭೂಸ್ವಾಧೀನ ಮತ್ತು ಇತರ ಸಮಸ್ಯೆಗಳಿಂದಾಗಿ ಬಾಕಿಯಾದ ಯೋಜನೆಗಳ ಬಗ್ಗೆ ರಾಜ್ಯಕ್ಕೆ ಕಾಳಜಿ ಇದೆ, ಈ ಯೋಜನೆಗಳ ಕಡೆಗೂ ಗಮನಹರಿಸಲಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಭೂಸ್ವಾಧೀನಕ್ಕೆ ಶೇಕಡಾ 30 ರಷ್ಟು ವೆಚ್ಚವನ್ನು ಭರಿಸಲು ನಿರ್ಧರಿಸಿದೆ ಮತ್ತು ರಸ್ತೆ ನಿರ್ಮಾಣ ಸಾಮಗ್ರಿಗಳ ಮೇಲೆ ವಿಶೇಷವಾಗಿ ಸ್ಟೀಲ್, ಸಿಮೆಂಟ್, ಮರಳು ಮತ್ತು ಒಟ್ಟು ಮೊತ್ತದ ಮೇಲೆ ರಾಜ್ಯ ಜಿಎಸ್ಟಿ ವಿನಾಯಿತಿಗಾಗಿ ಸುಮಾರು 1,000 ಕೋಟಿ ರೂ ನಿಗದಿ ಪಡಿಸುವ ಯೋಜನೆ ಹೊಂದಿದೆ ಎಂದಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…