ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಸುಲಲಿತ ವಾಹನ ಸಂಚಾರಕ್ಕಾಗಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ಕೋರಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೇಂದ್ರ ಸರಕಾರವನ್ನು ಮನವಿ ಮಾಡಿದ್ದಾರೆ. ಈಚೆಗೆ ಬೊಮ್ಮಾಯಿ ಅವರು ದೆಹಲಿ ಭೇಟಿಯ ವೇಳೆ ಕೇಂದ್ರ ಸಚಿವರನ್ನು ಭೇಟಿಯಾದ ಸಂದರ್ಭ ಮನವಿ ಮಾಡಿದ್ದಾರೆ.
ಜಪಾನ್ ಸರ್ಕಾರದ ಸಹಯೋಗದೊಂದಿಗೆ ಬಂದರು ನಗರ ಮಂಗಳೂರು ಮತ್ತು ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾದ ಶಿರಾಡಿ ಘಾಟ್ ವಿಭಾಗದ ಸುರಂಗ ಬೈಪಾಸ್ ನಿರ್ಮಾಣಕ್ಕೆ ಸಿಎಂ ಅನುಮೋದನೆ ಕೋರಿದ್ದಾರೆ. ಈ ಯೋಜನೆಯ ಬಂಡವಾಳ ವೆಚ್ಚ ಸುಮಾರು 10,146 ಕೋಟಿ ರೂಪಾಯಿ ಆಗಿದೆ. ಹಲವು ವರ್ಷಗಳಿಂದ ಈ ಯೋಜನೆಯ ಪ್ರಸ್ತಾಪ ಇದೆ. ಪರಿಸರದ ಮೇಲೆ ಯಾವುದೇ ಹಾನಿಯಾಗದಂತೆ ಜಪಾನ್ ಮಾದರಿಯಲ್ಲಿ ಈ ಯೋಜನೆ ಅನುಷ್ಟಾನದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗಿನ ಸಭೆ ಬಳಿಕ ಮಾತನಾಡಿದ ಸಿಎಂ, ಭೂಸ್ವಾಧೀನ ಮತ್ತು ಇತರ ಸಮಸ್ಯೆಗಳಿಂದಾಗಿ ಬಾಕಿಯಾದ ಯೋಜನೆಗಳ ಬಗ್ಗೆ ರಾಜ್ಯಕ್ಕೆ ಕಾಳಜಿ ಇದೆ, ಈ ಯೋಜನೆಗಳ ಕಡೆಗೂ ಗಮನಹರಿಸಲಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಭೂಸ್ವಾಧೀನಕ್ಕೆ ಶೇಕಡಾ 30 ರಷ್ಟು ವೆಚ್ಚವನ್ನು ಭರಿಸಲು ನಿರ್ಧರಿಸಿದೆ ಮತ್ತು ರಸ್ತೆ ನಿರ್ಮಾಣ ಸಾಮಗ್ರಿಗಳ ಮೇಲೆ ವಿಶೇಷವಾಗಿ ಸ್ಟೀಲ್, ಸಿಮೆಂಟ್, ಮರಳು ಮತ್ತು ಒಟ್ಟು ಮೊತ್ತದ ಮೇಲೆ ರಾಜ್ಯ ಜಿಎಸ್ಟಿ ವಿನಾಯಿತಿಗಾಗಿ ಸುಮಾರು 1,000 ಕೋಟಿ ರೂ ನಿಗದಿ ಪಡಿಸುವ ಯೋಜನೆ ಹೊಂದಿದೆ ಎಂದಿದ್ದಾರೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…