ಶಿರಾಡಿ ಘಾಟ್‌ ಸುರಂಗ ಮಾರ್ಗ | 14,000 ಕೋಟಿ | ಪ್ರಾಜೆಕ್ಟ್‌ ರಿಪೋರ್ಟ್‌ ಸಿದ್ಧ…! |

March 1, 2022
9:30 PM

ಶಿರಾಡಿ ಘಾಟ್‌ ಸುರಂಗ ಮಾರ್ಗ..! . ಡಿ ವಿ ಸದಾನಂದ ಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ಕೇಳುತ್ತಿದ್ದ ಸುದ್ದಿ. ಇದೀಗ ಮತ್ತೆ ಪ್ರಾಜೆಕ್ಟ್‌ ವರದಿ ಸಿದ್ಧವಾಗಿದೆ. 14,000 ಕೋಟಿ ರೂಪಾಯಿಯಲ್ಲಿ ಪ್ರಸ್ತಾವಿತ ಸುರಂಗ ಮಾರ್ಗ ಶಿರಾಡಿ ಘಾಟ್‌ ನಲ್ಲಿ ನಿರ್ಮಾಣ ಮಾಡಲು ವರದಿ ಸಿದ್ಧವಾಗಿದೆ.

Advertisement
Advertisement

ಶಿರಾಡಿ ಘಾಟ್ ಕರ್ನಾಟಕದ ಜೀವನಾಡಿ. ಕರಾವಳಿಯಿಂದ ರಾಜಧಾನಿಗೆ ಸಂಪರ್ಕಿಸುವ ಅಗತ್ಯ ರಸ್ತೆ. ವಾಣಿಜ್ಯ ವಹಿವಾಟು ಉತ್ತಮಗೊಳ್ಳಲು ಶಿರಾಡಿ ಘಾಟ್‌ ರಸ್ತೆ ವ್ಯವಸ್ಥಿತ ರೀತಿಯಲ್ಲಿರುವುದು  ಹಾಗೂ ಮಂಗಳೂರು-ಬೆಂಗಳೂರು ಹೆದ್ದಾರಿಯೂ ಗುಣಮಟ್ಟದಿಂದಲೂ, ವ್ಯವಸ್ಥಿತವಾಗಿ ಇರಬೇಕಾದ್ದು ಅಗತ್ಯವಾಗಿದೆ. ಇಡೀ ರಾಜ್ಯ ಆರ್ಥಿಕ ವಹಿವಾಟಿನ ಮೇಲೂ ಈ ರಸ್ತೆ ಪರಿಣಾಮ ಬೀರುತ್ತದೆ. ಹೀಗಾಗಿ ಇದೀಗ ಕೇಂದ್ರ ಸಚಿವ ನಿತಿನ್‌ ಗಡ್ಗರಿ ಅವರೂ ಈ ರಸ್ತೆಯ ಬಗ್ಗೆ ಆಸಕ್ತಿ ತೋರಿದ್ದಾರೆ. ಅಭಿವೃದ್ಧಿ ಪಡಿಸಲು, ಅದರಲ್ಲೂ ಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಕೂಡಾ ಹಲವು ವರ್ಷಗಳಿಂದ ಒತ್ತಾಯ ಮಾಡುತ್ತಿದ್ದಾರೆ.  ಇದೀಗ  ಘಾಟಿ ಪ್ರದೇಶದ  26 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಯನ್ನು ಯೋಜನೆಯ ಪ್ರಕಾರ ನಾಲ್ಕು ಪಥವನ್ನಾಗಿ ಮಾಡಲಾಗುವುದು ಮತ್ತು ಪ್ರಸ್ತಾವಿತ ಆರು ಪಥಗಳ ಸುರಂಗ ರಸ್ತೆಯನ್ನು ಅಭಿವೃದ್ಧಿಪಡಿಸಲು ಇಲಾಖೆ ಈಗಾಗಲೇ ಡಿಪಿಆರ್ ಅನ್ನು ಸಿದ್ಧಪಡಿಸಿದೆ. ಆದರೆ ಅರಣ್ಯ ಇಲಾಖೆಯ, ಪರಿಸರ ಇಲಾಖೆಯ ಅನುಮತಿ ಅಗತ್ಯವಾಗಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ 2025 ರ ವೇಳೆಗೆ ಶಿರಾಡಿ ಘಾಟ್‌ ಚತುಷ್ಪಥ ರಸ್ತೆಯಾಗಿಯೂ, ಸುರಂಗ ಮಾರ್ಗವಾಗಿಯೂ ಸಂಚಾರಕ್ಕೆ ಲಭ್ಯವಾಗಬಹುದು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |
May 22, 2025
2:37 PM
by: ಸಾಯಿಶೇಖರ್ ಕರಿಕಳ
ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |
May 22, 2025
7:33 AM
by: The Rural Mirror ಸುದ್ದಿಜಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು
May 22, 2025
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group