The Rural Mirror ವಾರದ ವಿಶೇಷ

ಶಿರಾಡಿ ಘಾಟ್‌ ಸುರಂಗ ಮಾರ್ಗ | 14,000 ಕೋಟಿ | ಪ್ರಾಜೆಕ್ಟ್‌ ರಿಪೋರ್ಟ್‌ ಸಿದ್ಧ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶಿರಾಡಿ ಘಾಟ್‌ ಸುರಂಗ ಮಾರ್ಗ..! . ಡಿ ವಿ ಸದಾನಂದ ಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ಕೇಳುತ್ತಿದ್ದ ಸುದ್ದಿ. ಇದೀಗ ಮತ್ತೆ ಪ್ರಾಜೆಕ್ಟ್‌ ವರದಿ ಸಿದ್ಧವಾಗಿದೆ. 14,000 ಕೋಟಿ ರೂಪಾಯಿಯಲ್ಲಿ ಪ್ರಸ್ತಾವಿತ ಸುರಂಗ ಮಾರ್ಗ ಶಿರಾಡಿ ಘಾಟ್‌ ನಲ್ಲಿ ನಿರ್ಮಾಣ ಮಾಡಲು ವರದಿ ಸಿದ್ಧವಾಗಿದೆ.

Advertisement
Advertisement

ಶಿರಾಡಿ ಘಾಟ್ ಕರ್ನಾಟಕದ ಜೀವನಾಡಿ. ಕರಾವಳಿಯಿಂದ ರಾಜಧಾನಿಗೆ ಸಂಪರ್ಕಿಸುವ ಅಗತ್ಯ ರಸ್ತೆ. ವಾಣಿಜ್ಯ ವಹಿವಾಟು ಉತ್ತಮಗೊಳ್ಳಲು ಶಿರಾಡಿ ಘಾಟ್‌ ರಸ್ತೆ ವ್ಯವಸ್ಥಿತ ರೀತಿಯಲ್ಲಿರುವುದು  ಹಾಗೂ ಮಂಗಳೂರು-ಬೆಂಗಳೂರು ಹೆದ್ದಾರಿಯೂ ಗುಣಮಟ್ಟದಿಂದಲೂ, ವ್ಯವಸ್ಥಿತವಾಗಿ ಇರಬೇಕಾದ್ದು ಅಗತ್ಯವಾಗಿದೆ. ಇಡೀ ರಾಜ್ಯ ಆರ್ಥಿಕ ವಹಿವಾಟಿನ ಮೇಲೂ ಈ ರಸ್ತೆ ಪರಿಣಾಮ ಬೀರುತ್ತದೆ. ಹೀಗಾಗಿ ಇದೀಗ ಕೇಂದ್ರ ಸಚಿವ ನಿತಿನ್‌ ಗಡ್ಗರಿ ಅವರೂ ಈ ರಸ್ತೆಯ ಬಗ್ಗೆ ಆಸಕ್ತಿ ತೋರಿದ್ದಾರೆ. ಅಭಿವೃದ್ಧಿ ಪಡಿಸಲು, ಅದರಲ್ಲೂ ಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಕೂಡಾ ಹಲವು ವರ್ಷಗಳಿಂದ ಒತ್ತಾಯ ಮಾಡುತ್ತಿದ್ದಾರೆ.  ಇದೀಗ  ಘಾಟಿ ಪ್ರದೇಶದ  26 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಯನ್ನು ಯೋಜನೆಯ ಪ್ರಕಾರ ನಾಲ್ಕು ಪಥವನ್ನಾಗಿ ಮಾಡಲಾಗುವುದು ಮತ್ತು ಪ್ರಸ್ತಾವಿತ ಆರು ಪಥಗಳ ಸುರಂಗ ರಸ್ತೆಯನ್ನು ಅಭಿವೃದ್ಧಿಪಡಿಸಲು ಇಲಾಖೆ ಈಗಾಗಲೇ ಡಿಪಿಆರ್ ಅನ್ನು ಸಿದ್ಧಪಡಿಸಿದೆ. ಆದರೆ ಅರಣ್ಯ ಇಲಾಖೆಯ, ಪರಿಸರ ಇಲಾಖೆಯ ಅನುಮತಿ ಅಗತ್ಯವಾಗಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ 2025 ರ ವೇಳೆಗೆ ಶಿರಾಡಿ ಘಾಟ್‌ ಚತುಷ್ಪಥ ರಸ್ತೆಯಾಗಿಯೂ, ಸುರಂಗ ಮಾರ್ಗವಾಗಿಯೂ ಸಂಚಾರಕ್ಕೆ ಲಭ್ಯವಾಗಬಹುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

5 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

5 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

5 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

5 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

15 hours ago