Advertisement
The Rural Mirror ವಾರದ ವಿಶೇಷ

ಶಿರಾಡಿ ಘಾಟ್‌ ಸುರಂಗ ಮಾರ್ಗ | 14,000 ಕೋಟಿ | ಪ್ರಾಜೆಕ್ಟ್‌ ರಿಪೋರ್ಟ್‌ ಸಿದ್ಧ…! |

Share

ಶಿರಾಡಿ ಘಾಟ್‌ ಸುರಂಗ ಮಾರ್ಗ..! . ಡಿ ವಿ ಸದಾನಂದ ಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ಕೇಳುತ್ತಿದ್ದ ಸುದ್ದಿ. ಇದೀಗ ಮತ್ತೆ ಪ್ರಾಜೆಕ್ಟ್‌ ವರದಿ ಸಿದ್ಧವಾಗಿದೆ. 14,000 ಕೋಟಿ ರೂಪಾಯಿಯಲ್ಲಿ ಪ್ರಸ್ತಾವಿತ ಸುರಂಗ ಮಾರ್ಗ ಶಿರಾಡಿ ಘಾಟ್‌ ನಲ್ಲಿ ನಿರ್ಮಾಣ ಮಾಡಲು ವರದಿ ಸಿದ್ಧವಾಗಿದೆ.

ಶಿರಾಡಿ ಘಾಟ್ ಕರ್ನಾಟಕದ ಜೀವನಾಡಿ. ಕರಾವಳಿಯಿಂದ ರಾಜಧಾನಿಗೆ ಸಂಪರ್ಕಿಸುವ ಅಗತ್ಯ ರಸ್ತೆ. ವಾಣಿಜ್ಯ ವಹಿವಾಟು ಉತ್ತಮಗೊಳ್ಳಲು ಶಿರಾಡಿ ಘಾಟ್‌ ರಸ್ತೆ ವ್ಯವಸ್ಥಿತ ರೀತಿಯಲ್ಲಿರುವುದು  ಹಾಗೂ ಮಂಗಳೂರು-ಬೆಂಗಳೂರು ಹೆದ್ದಾರಿಯೂ ಗುಣಮಟ್ಟದಿಂದಲೂ, ವ್ಯವಸ್ಥಿತವಾಗಿ ಇರಬೇಕಾದ್ದು ಅಗತ್ಯವಾಗಿದೆ. ಇಡೀ ರಾಜ್ಯ ಆರ್ಥಿಕ ವಹಿವಾಟಿನ ಮೇಲೂ ಈ ರಸ್ತೆ ಪರಿಣಾಮ ಬೀರುತ್ತದೆ. ಹೀಗಾಗಿ ಇದೀಗ ಕೇಂದ್ರ ಸಚಿವ ನಿತಿನ್‌ ಗಡ್ಗರಿ ಅವರೂ ಈ ರಸ್ತೆಯ ಬಗ್ಗೆ ಆಸಕ್ತಿ ತೋರಿದ್ದಾರೆ. ಅಭಿವೃದ್ಧಿ ಪಡಿಸಲು, ಅದರಲ್ಲೂ ಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಕೂಡಾ ಹಲವು ವರ್ಷಗಳಿಂದ ಒತ್ತಾಯ ಮಾಡುತ್ತಿದ್ದಾರೆ.  ಇದೀಗ  ಘಾಟಿ ಪ್ರದೇಶದ  26 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಯನ್ನು ಯೋಜನೆಯ ಪ್ರಕಾರ ನಾಲ್ಕು ಪಥವನ್ನಾಗಿ ಮಾಡಲಾಗುವುದು ಮತ್ತು ಪ್ರಸ್ತಾವಿತ ಆರು ಪಥಗಳ ಸುರಂಗ ರಸ್ತೆಯನ್ನು ಅಭಿವೃದ್ಧಿಪಡಿಸಲು ಇಲಾಖೆ ಈಗಾಗಲೇ ಡಿಪಿಆರ್ ಅನ್ನು ಸಿದ್ಧಪಡಿಸಿದೆ. ಆದರೆ ಅರಣ್ಯ ಇಲಾಖೆಯ, ಪರಿಸರ ಇಲಾಖೆಯ ಅನುಮತಿ ಅಗತ್ಯವಾಗಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ 2025 ರ ವೇಳೆಗೆ ಶಿರಾಡಿ ಘಾಟ್‌ ಚತುಷ್ಪಥ ರಸ್ತೆಯಾಗಿಯೂ, ಸುರಂಗ ಮಾರ್ಗವಾಗಿಯೂ ಸಂಚಾರಕ್ಕೆ ಲಭ್ಯವಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 hour ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

2 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

2 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

8 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

10 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

10 hours ago