Advertisement
The Rural Mirror ವಾರದ ವಿಶೇಷ

ಶಿರಾಡಿ ಘಾಟ್‌ ಸುರಂಗ ಮಾರ್ಗ | 14,000 ಕೋಟಿ | ಪ್ರಾಜೆಕ್ಟ್‌ ರಿಪೋರ್ಟ್‌ ಸಿದ್ಧ…! |

Share

ಶಿರಾಡಿ ಘಾಟ್‌ ಸುರಂಗ ಮಾರ್ಗ..! . ಡಿ ವಿ ಸದಾನಂದ ಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ಕೇಳುತ್ತಿದ್ದ ಸುದ್ದಿ. ಇದೀಗ ಮತ್ತೆ ಪ್ರಾಜೆಕ್ಟ್‌ ವರದಿ ಸಿದ್ಧವಾಗಿದೆ. 14,000 ಕೋಟಿ ರೂಪಾಯಿಯಲ್ಲಿ ಪ್ರಸ್ತಾವಿತ ಸುರಂಗ ಮಾರ್ಗ ಶಿರಾಡಿ ಘಾಟ್‌ ನಲ್ಲಿ ನಿರ್ಮಾಣ ಮಾಡಲು ವರದಿ ಸಿದ್ಧವಾಗಿದೆ.

ಶಿರಾಡಿ ಘಾಟ್ ಕರ್ನಾಟಕದ ಜೀವನಾಡಿ. ಕರಾವಳಿಯಿಂದ ರಾಜಧಾನಿಗೆ ಸಂಪರ್ಕಿಸುವ ಅಗತ್ಯ ರಸ್ತೆ. ವಾಣಿಜ್ಯ ವಹಿವಾಟು ಉತ್ತಮಗೊಳ್ಳಲು ಶಿರಾಡಿ ಘಾಟ್‌ ರಸ್ತೆ ವ್ಯವಸ್ಥಿತ ರೀತಿಯಲ್ಲಿರುವುದು  ಹಾಗೂ ಮಂಗಳೂರು-ಬೆಂಗಳೂರು ಹೆದ್ದಾರಿಯೂ ಗುಣಮಟ್ಟದಿಂದಲೂ, ವ್ಯವಸ್ಥಿತವಾಗಿ ಇರಬೇಕಾದ್ದು ಅಗತ್ಯವಾಗಿದೆ. ಇಡೀ ರಾಜ್ಯ ಆರ್ಥಿಕ ವಹಿವಾಟಿನ ಮೇಲೂ ಈ ರಸ್ತೆ ಪರಿಣಾಮ ಬೀರುತ್ತದೆ. ಹೀಗಾಗಿ ಇದೀಗ ಕೇಂದ್ರ ಸಚಿವ ನಿತಿನ್‌ ಗಡ್ಗರಿ ಅವರೂ ಈ ರಸ್ತೆಯ ಬಗ್ಗೆ ಆಸಕ್ತಿ ತೋರಿದ್ದಾರೆ. ಅಭಿವೃದ್ಧಿ ಪಡಿಸಲು, ಅದರಲ್ಲೂ ಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಕೂಡಾ ಹಲವು ವರ್ಷಗಳಿಂದ ಒತ್ತಾಯ ಮಾಡುತ್ತಿದ್ದಾರೆ.  ಇದೀಗ  ಘಾಟಿ ಪ್ರದೇಶದ  26 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಯನ್ನು ಯೋಜನೆಯ ಪ್ರಕಾರ ನಾಲ್ಕು ಪಥವನ್ನಾಗಿ ಮಾಡಲಾಗುವುದು ಮತ್ತು ಪ್ರಸ್ತಾವಿತ ಆರು ಪಥಗಳ ಸುರಂಗ ರಸ್ತೆಯನ್ನು ಅಭಿವೃದ್ಧಿಪಡಿಸಲು ಇಲಾಖೆ ಈಗಾಗಲೇ ಡಿಪಿಆರ್ ಅನ್ನು ಸಿದ್ಧಪಡಿಸಿದೆ. ಆದರೆ ಅರಣ್ಯ ಇಲಾಖೆಯ, ಪರಿಸರ ಇಲಾಖೆಯ ಅನುಮತಿ ಅಗತ್ಯವಾಗಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ 2025 ರ ವೇಳೆಗೆ ಶಿರಾಡಿ ಘಾಟ್‌ ಚತುಷ್ಪಥ ರಸ್ತೆಯಾಗಿಯೂ, ಸುರಂಗ ಮಾರ್ಗವಾಗಿಯೂ ಸಂಚಾರಕ್ಕೆ ಲಭ್ಯವಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

1 hour ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

6 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

9 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

9 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

24 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

1 day ago