ಶಿರಾಡಿ ಘಾಟ್ ಸುರಂಗ ಮಾರ್ಗ..! . ಡಿ ವಿ ಸದಾನಂದ ಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ಕೇಳುತ್ತಿದ್ದ ಸುದ್ದಿ. ಇದೀಗ ಮತ್ತೆ ಪ್ರಾಜೆಕ್ಟ್ ವರದಿ ಸಿದ್ಧವಾಗಿದೆ. 14,000 ಕೋಟಿ ರೂಪಾಯಿಯಲ್ಲಿ ಪ್ರಸ್ತಾವಿತ ಸುರಂಗ ಮಾರ್ಗ ಶಿರಾಡಿ ಘಾಟ್ ನಲ್ಲಿ ನಿರ್ಮಾಣ ಮಾಡಲು ವರದಿ ಸಿದ್ಧವಾಗಿದೆ.
ಶಿರಾಡಿ ಘಾಟ್ ಕರ್ನಾಟಕದ ಜೀವನಾಡಿ. ಕರಾವಳಿಯಿಂದ ರಾಜಧಾನಿಗೆ ಸಂಪರ್ಕಿಸುವ ಅಗತ್ಯ ರಸ್ತೆ. ವಾಣಿಜ್ಯ ವಹಿವಾಟು ಉತ್ತಮಗೊಳ್ಳಲು ಶಿರಾಡಿ ಘಾಟ್ ರಸ್ತೆ ವ್ಯವಸ್ಥಿತ ರೀತಿಯಲ್ಲಿರುವುದು ಹಾಗೂ ಮಂಗಳೂರು-ಬೆಂಗಳೂರು ಹೆದ್ದಾರಿಯೂ ಗುಣಮಟ್ಟದಿಂದಲೂ, ವ್ಯವಸ್ಥಿತವಾಗಿ ಇರಬೇಕಾದ್ದು ಅಗತ್ಯವಾಗಿದೆ. ಇಡೀ ರಾಜ್ಯ ಆರ್ಥಿಕ ವಹಿವಾಟಿನ ಮೇಲೂ ಈ ರಸ್ತೆ ಪರಿಣಾಮ ಬೀರುತ್ತದೆ. ಹೀಗಾಗಿ ಇದೀಗ ಕೇಂದ್ರ ಸಚಿವ ನಿತಿನ್ ಗಡ್ಗರಿ ಅವರೂ ಈ ರಸ್ತೆಯ ಬಗ್ಗೆ ಆಸಕ್ತಿ ತೋರಿದ್ದಾರೆ. ಅಭಿವೃದ್ಧಿ ಪಡಿಸಲು, ಅದರಲ್ಲೂ ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು ಅವರು ಕೂಡಾ ಹಲವು ವರ್ಷಗಳಿಂದ ಒತ್ತಾಯ ಮಾಡುತ್ತಿದ್ದಾರೆ. ಇದೀಗ ಘಾಟಿ ಪ್ರದೇಶದ 26 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಯನ್ನು ಯೋಜನೆಯ ಪ್ರಕಾರ ನಾಲ್ಕು ಪಥವನ್ನಾಗಿ ಮಾಡಲಾಗುವುದು ಮತ್ತು ಪ್ರಸ್ತಾವಿತ ಆರು ಪಥಗಳ ಸುರಂಗ ರಸ್ತೆಯನ್ನು ಅಭಿವೃದ್ಧಿಪಡಿಸಲು ಇಲಾಖೆ ಈಗಾಗಲೇ ಡಿಪಿಆರ್ ಅನ್ನು ಸಿದ್ಧಪಡಿಸಿದೆ. ಆದರೆ ಅರಣ್ಯ ಇಲಾಖೆಯ, ಪರಿಸರ ಇಲಾಖೆಯ ಅನುಮತಿ ಅಗತ್ಯವಾಗಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ 2025 ರ ವೇಳೆಗೆ ಶಿರಾಡಿ ಘಾಟ್ ಚತುಷ್ಪಥ ರಸ್ತೆಯಾಗಿಯೂ, ಸುರಂಗ ಮಾರ್ಗವಾಗಿಯೂ ಸಂಚಾರಕ್ಕೆ ಲಭ್ಯವಾಗಬಹುದು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…