ಶಿರಾಡಿ ಘಾಟ್ ಸುರಂಗ ಮಾರ್ಗ..! . ಡಿ ವಿ ಸದಾನಂದ ಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ಕೇಳುತ್ತಿದ್ದ ಸುದ್ದಿ. ಇದೀಗ ಮತ್ತೆ ಪ್ರಾಜೆಕ್ಟ್ ವರದಿ ಸಿದ್ಧವಾಗಿದೆ. 14,000 ಕೋಟಿ ರೂಪಾಯಿಯಲ್ಲಿ ಪ್ರಸ್ತಾವಿತ ಸುರಂಗ ಮಾರ್ಗ ಶಿರಾಡಿ ಘಾಟ್ ನಲ್ಲಿ ನಿರ್ಮಾಣ ಮಾಡಲು ವರದಿ ಸಿದ್ಧವಾಗಿದೆ.
ಶಿರಾಡಿ ಘಾಟ್ ಕರ್ನಾಟಕದ ಜೀವನಾಡಿ. ಕರಾವಳಿಯಿಂದ ರಾಜಧಾನಿಗೆ ಸಂಪರ್ಕಿಸುವ ಅಗತ್ಯ ರಸ್ತೆ. ವಾಣಿಜ್ಯ ವಹಿವಾಟು ಉತ್ತಮಗೊಳ್ಳಲು ಶಿರಾಡಿ ಘಾಟ್ ರಸ್ತೆ ವ್ಯವಸ್ಥಿತ ರೀತಿಯಲ್ಲಿರುವುದು ಹಾಗೂ ಮಂಗಳೂರು-ಬೆಂಗಳೂರು ಹೆದ್ದಾರಿಯೂ ಗುಣಮಟ್ಟದಿಂದಲೂ, ವ್ಯವಸ್ಥಿತವಾಗಿ ಇರಬೇಕಾದ್ದು ಅಗತ್ಯವಾಗಿದೆ. ಇಡೀ ರಾಜ್ಯ ಆರ್ಥಿಕ ವಹಿವಾಟಿನ ಮೇಲೂ ಈ ರಸ್ತೆ ಪರಿಣಾಮ ಬೀರುತ್ತದೆ. ಹೀಗಾಗಿ ಇದೀಗ ಕೇಂದ್ರ ಸಚಿವ ನಿತಿನ್ ಗಡ್ಗರಿ ಅವರೂ ಈ ರಸ್ತೆಯ ಬಗ್ಗೆ ಆಸಕ್ತಿ ತೋರಿದ್ದಾರೆ. ಅಭಿವೃದ್ಧಿ ಪಡಿಸಲು, ಅದರಲ್ಲೂ ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು ಅವರು ಕೂಡಾ ಹಲವು ವರ್ಷಗಳಿಂದ ಒತ್ತಾಯ ಮಾಡುತ್ತಿದ್ದಾರೆ. ಇದೀಗ ಘಾಟಿ ಪ್ರದೇಶದ 26 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಯನ್ನು ಯೋಜನೆಯ ಪ್ರಕಾರ ನಾಲ್ಕು ಪಥವನ್ನಾಗಿ ಮಾಡಲಾಗುವುದು ಮತ್ತು ಪ್ರಸ್ತಾವಿತ ಆರು ಪಥಗಳ ಸುರಂಗ ರಸ್ತೆಯನ್ನು ಅಭಿವೃದ್ಧಿಪಡಿಸಲು ಇಲಾಖೆ ಈಗಾಗಲೇ ಡಿಪಿಆರ್ ಅನ್ನು ಸಿದ್ಧಪಡಿಸಿದೆ. ಆದರೆ ಅರಣ್ಯ ಇಲಾಖೆಯ, ಪರಿಸರ ಇಲಾಖೆಯ ಅನುಮತಿ ಅಗತ್ಯವಾಗಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ 2025 ರ ವೇಳೆಗೆ ಶಿರಾಡಿ ಘಾಟ್ ಚತುಷ್ಪಥ ರಸ್ತೆಯಾಗಿಯೂ, ಸುರಂಗ ಮಾರ್ಗವಾಗಿಯೂ ಸಂಚಾರಕ್ಕೆ ಲಭ್ಯವಾಗಬಹುದು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…