ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ರಚನೆಗೆ ಎರಡನೇ ಸಮೀಕ್ಷೆಯಂತೆ ಡಿಪಿಆರ್ 12500 ಕೋಟಿ ರೂ. ಈಗ ಯೋಜನೆಯ ವಿನ್ಯಾಸ ಬದಲಾಗಿದ್ದು, 2024ರಲ್ಲಿ ಕಾಮಗಾರಿ ಆರಂಭವಾಗಲಿದೆ ಎನ್ನುವ ಸುದ್ದಿಯೊಂದು ಬಂದಿದೆ.
ಸಂಸದ ನಳಿನ್ ಕುಮಾರ್ ಕಟೀಲು ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಈ ಸುದ್ದಿಯನ್ನು ಹೇಳಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಶಿರಾಡಿ ಘಾಟ್ನಲ್ಲಿ ಬೃಹತ್ ಸುರಂಗ ಮಾರ್ಗ ನಿರ್ಮಾಣಕ್ಕೆ ಹೊಸ ವಿನ್ಯಾಸ ನೀಡಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಶಿರಾಡಿಯಲ್ಲಿ ಹೆದ್ದಾರಿ ಬದಲು ಪರ್ಯಾಯ ಸುರಂಗ ಮಾರ್ಗ ನಿರ್ಮಿಸಲು ಕೇಂದ್ರ ಸರ್ಕಾರ ಎರಡು ಬಾರಿ ಸಮೀಕ್ಷೆ ನಡೆಸಿದೆ. ಮೊದಲ ಸಮೀಕ್ಷೆಯಂತೆ 3000 ಕೋಟಿ ರೂ.ಗಳ ಡಿಪಿಆರ್ ಮಾಡಲಾಗಿದ್ದು, ಎರಡನೇ ಸಮೀಕ್ಷೆಯಂತೆ ಡಿಪಿಆರ್ 12500 ಕೋಟಿ ರೂ. ಈಗ ಯೋಜನೆಯ ವಿನ್ಯಾಸ ಬದಲಾಗಿದೆ. ಎರಡು ಸ್ಥಳಗಳಲ್ಲಿ ಸುರಂಗ ಮತ್ತು ಇತರ ಪ್ರದೇಶಗಳಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು. ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ 2500 ಕೋಟಿ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. 2024ರಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ನಳಿನ್ ಕುಮಾರ್ ಕಟೀಲು ಮಾಹಿತಿ ನೀಡಿದ್ದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…