ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ರಚನೆಗೆ ಎರಡನೇ ಸಮೀಕ್ಷೆಯಂತೆ ಡಿಪಿಆರ್ 12500 ಕೋಟಿ ರೂ. ಈಗ ಯೋಜನೆಯ ವಿನ್ಯಾಸ ಬದಲಾಗಿದ್ದು, 2024ರಲ್ಲಿ ಕಾಮಗಾರಿ ಆರಂಭವಾಗಲಿದೆ ಎನ್ನುವ ಸುದ್ದಿಯೊಂದು ಬಂದಿದೆ.
ಸಂಸದ ನಳಿನ್ ಕುಮಾರ್ ಕಟೀಲು ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಈ ಸುದ್ದಿಯನ್ನು ಹೇಳಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಶಿರಾಡಿ ಘಾಟ್ನಲ್ಲಿ ಬೃಹತ್ ಸುರಂಗ ಮಾರ್ಗ ನಿರ್ಮಾಣಕ್ಕೆ ಹೊಸ ವಿನ್ಯಾಸ ನೀಡಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಶಿರಾಡಿಯಲ್ಲಿ ಹೆದ್ದಾರಿ ಬದಲು ಪರ್ಯಾಯ ಸುರಂಗ ಮಾರ್ಗ ನಿರ್ಮಿಸಲು ಕೇಂದ್ರ ಸರ್ಕಾರ ಎರಡು ಬಾರಿ ಸಮೀಕ್ಷೆ ನಡೆಸಿದೆ. ಮೊದಲ ಸಮೀಕ್ಷೆಯಂತೆ 3000 ಕೋಟಿ ರೂ.ಗಳ ಡಿಪಿಆರ್ ಮಾಡಲಾಗಿದ್ದು, ಎರಡನೇ ಸಮೀಕ್ಷೆಯಂತೆ ಡಿಪಿಆರ್ 12500 ಕೋಟಿ ರೂ. ಈಗ ಯೋಜನೆಯ ವಿನ್ಯಾಸ ಬದಲಾಗಿದೆ. ಎರಡು ಸ್ಥಳಗಳಲ್ಲಿ ಸುರಂಗ ಮತ್ತು ಇತರ ಪ್ರದೇಶಗಳಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು. ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ 2500 ಕೋಟಿ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. 2024ರಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ನಳಿನ್ ಕುಮಾರ್ ಕಟೀಲು ಮಾಹಿತಿ ನೀಡಿದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…