ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ರಚನೆಗೆ ಎರಡನೇ ಸಮೀಕ್ಷೆಯಂತೆ ಡಿಪಿಆರ್ 12500 ಕೋಟಿ ರೂ. ಈಗ ಯೋಜನೆಯ ವಿನ್ಯಾಸ ಬದಲಾಗಿದ್ದು, 2024ರಲ್ಲಿ ಕಾಮಗಾರಿ ಆರಂಭವಾಗಲಿದೆ ಎನ್ನುವ ಸುದ್ದಿಯೊಂದು ಬಂದಿದೆ.
ಸಂಸದ ನಳಿನ್ ಕುಮಾರ್ ಕಟೀಲು ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಈ ಸುದ್ದಿಯನ್ನು ಹೇಳಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಶಿರಾಡಿ ಘಾಟ್ನಲ್ಲಿ ಬೃಹತ್ ಸುರಂಗ ಮಾರ್ಗ ನಿರ್ಮಾಣಕ್ಕೆ ಹೊಸ ವಿನ್ಯಾಸ ನೀಡಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಶಿರಾಡಿಯಲ್ಲಿ ಹೆದ್ದಾರಿ ಬದಲು ಪರ್ಯಾಯ ಸುರಂಗ ಮಾರ್ಗ ನಿರ್ಮಿಸಲು ಕೇಂದ್ರ ಸರ್ಕಾರ ಎರಡು ಬಾರಿ ಸಮೀಕ್ಷೆ ನಡೆಸಿದೆ. ಮೊದಲ ಸಮೀಕ್ಷೆಯಂತೆ 3000 ಕೋಟಿ ರೂ.ಗಳ ಡಿಪಿಆರ್ ಮಾಡಲಾಗಿದ್ದು, ಎರಡನೇ ಸಮೀಕ್ಷೆಯಂತೆ ಡಿಪಿಆರ್ 12500 ಕೋಟಿ ರೂ. ಈಗ ಯೋಜನೆಯ ವಿನ್ಯಾಸ ಬದಲಾಗಿದೆ. ಎರಡು ಸ್ಥಳಗಳಲ್ಲಿ ಸುರಂಗ ಮತ್ತು ಇತರ ಪ್ರದೇಶಗಳಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು. ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ 2500 ಕೋಟಿ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. 2024ರಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ನಳಿನ್ ಕುಮಾರ್ ಕಟೀಲು ಮಾಹಿತಿ ನೀಡಿದ್ದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…