MIRROR FOCUS

ಸತತ 6 ಬಾರಿ ಕುಸಿದ ಶಿರಾಡಿ ಘಾಟ್​ | ಕಣ್ಣೆದುರೇ ಕುಸಿಯುತ್ತಿರುವ ಗುಡ್ಡಗಳು | ತೀವ್ರ ಅನಿವಾರ್ಯತೆಯಾದರೆ ಮಾತ್ರ ಹೆದ್ದಾರಿ ಬಂದ್ ​- ಕೃಷ್ಣ ಬೈರೇಗೌಡ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಶಿರಾಡಿ ಘಾಟ್​ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ  ಭೂ – ಕುಸಿತ ಮುಂದುವರೆದಿರುವುದು ಜನರಲ್ಲಿ ಆತಂಕವನ್ನುಂಟು ಮಾಡಿದೆ. ಶಿರಾಡಿ ಘಾಟ್​ನಲ್ಲಿ ಕೆಸರಿನ ರಾಶಿ ಹರಿದು ಬರುತ್ತಿರುವುದು ದೃಶ್ಯ ಕಂಡು ಬಂದಿದೆ. ಈ ನಡುವೆ ಹೆದ್ದಾರಿ ಬಂದ್‌ ಮಾಡುವ ಪರಿಸ್ಥಿತಿ ಇಲ್ಲ. ಜುಲೈ 31 ರಂದು, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಶಾಸಕ ಸಿಮೆಂಟ್​ ಮಂಜು ಭೂಕುಸಿತ ಸ್ಥಳವನ್ನು ವೀಕ್ಷಿಸಿದ್ದಾರೆ. ಬಳಿಕ ಸಚಿವರು ತೀವ್ರ ಅನಿವಾರ್ಯವಾದರೇ ಮಾತ್ರ ಹೆದ್ದಾರಿ ಬಂದ್​ ಮಾಡುತ್ತೇವೆ ಎಂದು ಹೇಳಿದ್ದಾರೆ.

Advertisement

ಮಂಗಳವಾರ ಸಂಜೆ ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಶಿರಾಡಿ ಘಾಟ್​​ ರಸ್ತೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಹಗಲು – ರಾತ್ರಿ ಕಾರ್ಯಾಚರಣೆ ನಡೆಸಿ ಬುಧವಾರ ಹೆದ್ದಾರಿಯಲ್ಲಿದ್ದ ವಾಹನಗಳಿಗೆ ಏಕ ಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಸಂಜೆಯ ವೇಳೆಗೆ ಅದೇ ಸ್ಥಳದಲ್ಲಿಯೇ ಭೂಕುಸಿತ ಉಂಟಾಗಿ ಎರಡು ಕಂಟೈನರ್ ಹಾಗೂ ಒಂದು ಟ್ಯಾಂಕರ್ ಸ್ಥಳದಲ್ಲಿ ಸಿಲುಕಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆಯಿಂದ ಶಿರಾಡಿಯಲ್ಲಿ ಪುನಃ ತಾತ್ಕಾಲಿಕವಾಗಿ ಹೆದ್ದಾರಿ ಬಂದ್ ಮಾಡಲಾಗಿತ್ತು. ಇದರಿಂದ ಹಲವು ಭಾರಿ ವಾಹನಗಳು ಹೆದ್ದಾರಿಯಲ್ಲೇ ಸಿಲುಕಿದ್ದವು. ಹೀಗಾಗಿ ಉಪವಿಭಾಗಾಧಿಕಾರಿ ಡಾ. ಶ್ರುತಿ, ತಹಶೀಲ್ದಾರ್​ ಮೇಘನಾ ರಾತ್ರಿ ಸುರಿಯುತ್ತಿದ್ದ ಮಳೆಯ ನಡುವೆ ಭೂಕುಸಿತ ಸ್ಥಳದಲ್ಲಿ ಹಲವು ಗಂಟೆಗಳ ಮೊಕ್ಕಾಂ ಹೂಡಿ ಮಣ್ಣು ತೆರವು ಮಾಡುವ ಕಾರ್ಯಾಕ್ಕೆ ವೇಗ ನೀಡಿದ್ದರು.

ಗುರುವಾರ ಮುಂಜಾನೆ ಜಿಲ್ಲಾಧಿಕಾರಿ ಸತ್ಯಭಾಮ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಮಣ್ಣು ತೆರವುಗೊಳಿಸಿ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸಿಲುಕಿದ್ದ ವಾಹನಗಳನ್ನು ಕಳುಹಿಸುವುದಕ್ಕೆ ಆದ್ಯತೆ ನೀಡಲಾಯಿತು. ಆದರೆ, 11:45ರ ವೇಳೆಯಲ್ಲಿ ಪುನಃ ಭೂ-ಕುಸಿತ ಉಂಟಾಗಿದ್ದು ಕಾರ್ಯಾಚರಣೆಗೆ ಅಡ್ಡಿಯಾಯಿತು. ಬಳಿಕ ಕೆಲ ಗಂಟೆಗಳ ಕಾಲ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಮಧ್ಯಾಹ್ನ 2 ಗಂಟೆಯ ವೇಳೆಗೆ ಮತ್ತೆ ಮಳೆಯಾರ್ಭಟದಿಂದ ವಾಹನಗಳನ್ನು ಏಕಮುಖವಾಗಿ ಸಂಚಾರಕ್ಕೆ ಬಿಡಲಾಯಿತು.

ಮಂಗಳೂರು – ಬೆಂಗಳೂರು ನಡುವೆ ಇರುವ ಅತೀ ಕಡಿಮೆ ಅಂತರದ ರಸ್ತೆ ಮಾರ್ಗವಾದ ಶಿರಾಡಿ ಘಾಟ್ ಈಗಾಗಲೇ 6ನೇ ಬಾರಿಗೆ ಕುಸಿದಿದ್ದು, ಎತ್ತಿನಹೊಳೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆಯ ಅವೈಜ್ಞಾನಿಕ ಕಾಮಗಾರಿಯೇ ಈ ದುರ್ಘಟನೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

6 hours ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

9 hours ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

22 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

23 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago