Advertisement
MIRROR FOCUS

ಸತತ 6 ಬಾರಿ ಕುಸಿದ ಶಿರಾಡಿ ಘಾಟ್​ | ಕಣ್ಣೆದುರೇ ಕುಸಿಯುತ್ತಿರುವ ಗುಡ್ಡಗಳು | ತೀವ್ರ ಅನಿವಾರ್ಯತೆಯಾದರೆ ಮಾತ್ರ ಹೆದ್ದಾರಿ ಬಂದ್ ​- ಕೃಷ್ಣ ಬೈರೇಗೌಡ

Share

 ಶಿರಾಡಿ ಘಾಟ್​ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ  ಭೂ – ಕುಸಿತ ಮುಂದುವರೆದಿರುವುದು ಜನರಲ್ಲಿ ಆತಂಕವನ್ನುಂಟು ಮಾಡಿದೆ. ಶಿರಾಡಿ ಘಾಟ್​ನಲ್ಲಿ ಕೆಸರಿನ ರಾಶಿ ಹರಿದು ಬರುತ್ತಿರುವುದು ದೃಶ್ಯ ಕಂಡು ಬಂದಿದೆ. ಈ ನಡುವೆ ಹೆದ್ದಾರಿ ಬಂದ್‌ ಮಾಡುವ ಪರಿಸ್ಥಿತಿ ಇಲ್ಲ. ಜುಲೈ 31 ರಂದು, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಶಾಸಕ ಸಿಮೆಂಟ್​ ಮಂಜು ಭೂಕುಸಿತ ಸ್ಥಳವನ್ನು ವೀಕ್ಷಿಸಿದ್ದಾರೆ. ಬಳಿಕ ಸಚಿವರು ತೀವ್ರ ಅನಿವಾರ್ಯವಾದರೇ ಮಾತ್ರ ಹೆದ್ದಾರಿ ಬಂದ್​ ಮಾಡುತ್ತೇವೆ ಎಂದು ಹೇಳಿದ್ದಾರೆ.

ಮಂಗಳವಾರ ಸಂಜೆ ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಶಿರಾಡಿ ಘಾಟ್​​ ರಸ್ತೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಹಗಲು – ರಾತ್ರಿ ಕಾರ್ಯಾಚರಣೆ ನಡೆಸಿ ಬುಧವಾರ ಹೆದ್ದಾರಿಯಲ್ಲಿದ್ದ ವಾಹನಗಳಿಗೆ ಏಕ ಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಸಂಜೆಯ ವೇಳೆಗೆ ಅದೇ ಸ್ಥಳದಲ್ಲಿಯೇ ಭೂಕುಸಿತ ಉಂಟಾಗಿ ಎರಡು ಕಂಟೈನರ್ ಹಾಗೂ ಒಂದು ಟ್ಯಾಂಕರ್ ಸ್ಥಳದಲ್ಲಿ ಸಿಲುಕಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆಯಿಂದ ಶಿರಾಡಿಯಲ್ಲಿ ಪುನಃ ತಾತ್ಕಾಲಿಕವಾಗಿ ಹೆದ್ದಾರಿ ಬಂದ್ ಮಾಡಲಾಗಿತ್ತು. ಇದರಿಂದ ಹಲವು ಭಾರಿ ವಾಹನಗಳು ಹೆದ್ದಾರಿಯಲ್ಲೇ ಸಿಲುಕಿದ್ದವು. ಹೀಗಾಗಿ ಉಪವಿಭಾಗಾಧಿಕಾರಿ ಡಾ. ಶ್ರುತಿ, ತಹಶೀಲ್ದಾರ್​ ಮೇಘನಾ ರಾತ್ರಿ ಸುರಿಯುತ್ತಿದ್ದ ಮಳೆಯ ನಡುವೆ ಭೂಕುಸಿತ ಸ್ಥಳದಲ್ಲಿ ಹಲವು ಗಂಟೆಗಳ ಮೊಕ್ಕಾಂ ಹೂಡಿ ಮಣ್ಣು ತೆರವು ಮಾಡುವ ಕಾರ್ಯಾಕ್ಕೆ ವೇಗ ನೀಡಿದ್ದರು.

ಗುರುವಾರ ಮುಂಜಾನೆ ಜಿಲ್ಲಾಧಿಕಾರಿ ಸತ್ಯಭಾಮ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಮಣ್ಣು ತೆರವುಗೊಳಿಸಿ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸಿಲುಕಿದ್ದ ವಾಹನಗಳನ್ನು ಕಳುಹಿಸುವುದಕ್ಕೆ ಆದ್ಯತೆ ನೀಡಲಾಯಿತು. ಆದರೆ, 11:45ರ ವೇಳೆಯಲ್ಲಿ ಪುನಃ ಭೂ-ಕುಸಿತ ಉಂಟಾಗಿದ್ದು ಕಾರ್ಯಾಚರಣೆಗೆ ಅಡ್ಡಿಯಾಯಿತು. ಬಳಿಕ ಕೆಲ ಗಂಟೆಗಳ ಕಾಲ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಮಧ್ಯಾಹ್ನ 2 ಗಂಟೆಯ ವೇಳೆಗೆ ಮತ್ತೆ ಮಳೆಯಾರ್ಭಟದಿಂದ ವಾಹನಗಳನ್ನು ಏಕಮುಖವಾಗಿ ಸಂಚಾರಕ್ಕೆ ಬಿಡಲಾಯಿತು.

ಮಂಗಳೂರು – ಬೆಂಗಳೂರು ನಡುವೆ ಇರುವ ಅತೀ ಕಡಿಮೆ ಅಂತರದ ರಸ್ತೆ ಮಾರ್ಗವಾದ ಶಿರಾಡಿ ಘಾಟ್ ಈಗಾಗಲೇ 6ನೇ ಬಾರಿಗೆ ಕುಸಿದಿದ್ದು, ಎತ್ತಿನಹೊಳೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆಯ ಅವೈಜ್ಞಾನಿಕ ಕಾಮಗಾರಿಯೇ ಈ ದುರ್ಘಟನೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

4 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

24 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago