ಶಿರಾಡಿ ಘಾಟ್ ರೈಲು ಮಾರ್ಗದ ಎಡಕುಮರಿ – ಶಿರಿಬಾಗಿಲು ರೈಲು ನಿಲ್ದಾಣಗಳ ಮಧ್ಯೆ ಶನಿವಾರ ರಾತ್ರಿ ಭೂಕುಸಿತ ಸಂಭವಿಸಿದ್ದು, ಇದರ ಪರಿಣಾಮವಾಗಿ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಸದ್ಯ ರೈಲು ಓಡಾಟ ಸಾಧ್ಯವಾಗುತ್ತಿಲ್ಲ, ಹಗಲು ವೇಳೆಯ ಎಲ್ಲಾ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ರೈಲ್ವೇ ಮೂಲಗಳು ತಿಳಿಸಿವೆ.
ರೈಲ್ವೆ ಇಲಾಖೆ ತುರ್ತು ಕ್ರಮ ಕೈಗೊಂಡಿದ್ದು, ಪರಿಹಾರ ಸಾಮಗ್ರಿಗಳೊಂದಿಗೆ ವಿಶೇಷ ರೈಲು ಘಟನಾ ಸ್ಥಳಕ್ಕೆ ತಲುಪಿದೆ. ರೈಲ್ವೆ ಸಿಬ್ಬಂದಿ ಮತ್ತು ತಾಂತ್ರಿಕ ತಂಡಗಳು ಭೂಕುಸಿತ ತೆರವುಗೊಳಿಸುವ ಕಾರ್ಯವನ್ನು ನಡೆಸುತ್ತಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಹಾಸನ, ಸುಬ್ರಹ್ಮಣ್ಯ ರಸ್ತೆ, ಶಿರಿಬಾಗಿಲು, ಕಬಕ ಪುತ್ತೂರು ಹಾಗೂ ಬಂಟ್ವಾಳ ರೈಲು ನಿಲ್ದಾಣಗಳಲ್ಲಿ ಆಹಾರ ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ಶಿರಾಡಿ ಘಾಟಿಯಲ್ಲಿ ಸಂಭವಿಸಿರುವ ಭೂಕುಸಿತದ ಹಿನ್ನೆಲೆಯಲ್ಲಿ, ನಿನ್ನೆ ಸಂಚರಿಸಬೇಕಿದ್ದ ಎಲ್ಲಾ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳನ್ನು ನಿಲ್ದಾಣಗಳಲ್ಲೇ ಸ್ಥಗಿತಗೊಳಿಸಲಾಗಿದ್ದು, ಒಂದು ರೈಲನ್ನು ಪರ್ಯಾಯ ಮಾರ್ಗದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇಂದಿನ ಹಗಲು ವೇಳೆಯ ಎಲ್ಲಾ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.

A landslide occurred around 8:45 PM between Yedakumari and Shiribagilu stations on the Shiradi Ghat railway section, disrupting train services. Railway authorities have deployed a Relief Material Train, and restoration work is underway. Catering facilities have been arranged for stranded passengers at Hassan, Subrahmanya Road, Shiribagilu, Kabaka Puttur, and Bantawala stations. Passenger safety remains the top priority.

