ಶಿರಾಡಿ ಘಾಟಿ | ಲಘು ವಾಹನಗಳ ಸಂಚಾರಕ್ಕೆ ಅವಕಾಶ | ಇಲ್ಲಿ ಈಗ ಏಕಮುಖ ಸಂಚಾರ | ವಾಹನ ಸವಾರರೇ ಗಮನಿಸಿ |

July 17, 2022
11:12 PM

ಶಿರಾಡಿ ಘಾಟಿಯ ಪ್ರದೇಶದ ದೋಣಿಗಲ್ ಸಮೀಪ ಭೂಕುಸಿತ ಉಂಟಾಗಿ  ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ ಆತಂಕಕ್ಕೆ ಒಳಗಾಗಿತ್ತು. ಬಳಿಕ ಭಾರೀ ಮಳೆಯ ಕಾರಣದಿಂದ ಮತ್ತೆ ಅಲ್ಲಲ್ಲಿ  ಕುಸಿತ ಉಂಟಾಗಿ  ಮಂಗಳೂರು-ಬೆಂಗಳೂರು ವಾಹನ ಸಂಚಾರ  ಬಂದ್ ಮಾಡಲಾಗಿತ್ತು. ಇದೀಗ ಶಿರಾಡಿ ಘಾಟ್‌ ಮೂಲಕ ಮತ್ತೆ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು ಪರ್ಯಾಯ ರಸ್ತೆ ಮೂಲಕ ಸಂಚರಿಸಲು ಹಾಸನ ಜಿಲ್ಲಾಧಿಕಾರಿ ಗಿರೀಶ್‌ ಆದೇಶ ಹೊರಡಿಸಿದ್ದಾರೆ.

Advertisement
Advertisement
Advertisement
Advertisement

ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್ ಆಂಬುಲೆನ್ಸ್ ಏಕಮುಖವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ. ಸಕಲೇಶಪುರ, ಆನೆ ಮಹಲ್, ಕ್ಯಾನಹಳಹಳ್ಳಿ, ಚಿನ್ನಹಳ್ಳಿ, ಕಡಗರಹಳ್ಳಿ ಮಾರ್ಗದಲ್ಲಿ ಮಾರನಹಳ್ಳಿ ತಲುಪಿ ಮಂಗಳೂರಿಗೆ ಹೋಗಲು ಅವಕಾಶ ನೀಡಲಾಗಿದೆ.

Advertisement

ಮಂಗಳೂರಿನಿಂದ ಬೆಂಗಳೂರಿಗೆ ಹೋಗೋ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್ ಗಳು ಮಾರನಹಳ್ಳಿಯಿಂದ‌ ಕಾಡುಮನೆ, ಕಾರ್ಲೆ ಕೂಡಿಗೆ, ಆನೆಮಹಲ್ ಸಕಲೇಶಪುರ ಮಾರ್ಗದ ಮೂಲಕ ಬೆಂಗಳೂರಿಗೆ ಹೋಗಬಹುದು. ಲಘು ವಾಹನಗಳಿಗೆ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.

Advertisement

ಎರಡೂ ಕಡೆಯಿಂದ ಯಾವುದೇ ಸಮಸ್ಯೆ ಆಗದಂತೆ ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.ಶಿರಾಡಿ ಘಾಟ್‌ ಪ್ರದೇಶದಲ್ಲಿ ಭಾರೀ ಮಳೆಯ ಕಾರಣದಿಂದ ಭೂಕುಸಿತ ಉಂಟಾಗಿತ್ತು. ಹೀಗಾಗಿ ಜು.14 ರಂದು ಹೆಚ್ಚಿನ ಪ್ರಮಾಣದ ಭೂಕುಸಿತ ಉಂಟಾಗಿ ಘನ ವಾಹನ ಸಂಚಾರ ಬಂದ್‌ ಆಗಿತ್ತು. ಅದಾದ ಬಳಿಕ ಮತ್ತೆ ಕುಸಿತ ಸಂಭವಿಸಿ ವಾಹನ ಸಂಚಾರ ಬಂದ್‌ ಆಗಿತ್ತು. ಇದೀಗ ಕೇವಲ ಲಘುವಾಹನಗಳಿಗೆ ಮಾತ್ರ ಪರ್ಯಾಯ ರಸ್ತೆಯ ಮೂಲಕ  ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror