ರಾಜ್ಯ

ಶಿರಾಡಿ ಘಾಟಿ | ಲಘು ವಾಹನಗಳ ಸಂಚಾರಕ್ಕೆ ಅವಕಾಶ | ಇಲ್ಲಿ ಈಗ ಏಕಮುಖ ಸಂಚಾರ | ವಾಹನ ಸವಾರರೇ ಗಮನಿಸಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶಿರಾಡಿ ಘಾಟಿಯ ಪ್ರದೇಶದ ದೋಣಿಗಲ್ ಸಮೀಪ ಭೂಕುಸಿತ ಉಂಟಾಗಿ  ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ ಆತಂಕಕ್ಕೆ ಒಳಗಾಗಿತ್ತು. ಬಳಿಕ ಭಾರೀ ಮಳೆಯ ಕಾರಣದಿಂದ ಮತ್ತೆ ಅಲ್ಲಲ್ಲಿ  ಕುಸಿತ ಉಂಟಾಗಿ  ಮಂಗಳೂರು-ಬೆಂಗಳೂರು ವಾಹನ ಸಂಚಾರ  ಬಂದ್ ಮಾಡಲಾಗಿತ್ತು. ಇದೀಗ ಶಿರಾಡಿ ಘಾಟ್‌ ಮೂಲಕ ಮತ್ತೆ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು ಪರ್ಯಾಯ ರಸ್ತೆ ಮೂಲಕ ಸಂಚರಿಸಲು ಹಾಸನ ಜಿಲ್ಲಾಧಿಕಾರಿ ಗಿರೀಶ್‌ ಆದೇಶ ಹೊರಡಿಸಿದ್ದಾರೆ.

Advertisement
Advertisement

ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್ ಆಂಬುಲೆನ್ಸ್ ಏಕಮುಖವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ. ಸಕಲೇಶಪುರ, ಆನೆ ಮಹಲ್, ಕ್ಯಾನಹಳಹಳ್ಳಿ, ಚಿನ್ನಹಳ್ಳಿ, ಕಡಗರಹಳ್ಳಿ ಮಾರ್ಗದಲ್ಲಿ ಮಾರನಹಳ್ಳಿ ತಲುಪಿ ಮಂಗಳೂರಿಗೆ ಹೋಗಲು ಅವಕಾಶ ನೀಡಲಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೋಗೋ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್ ಗಳು ಮಾರನಹಳ್ಳಿಯಿಂದ‌ ಕಾಡುಮನೆ, ಕಾರ್ಲೆ ಕೂಡಿಗೆ, ಆನೆಮಹಲ್ ಸಕಲೇಶಪುರ ಮಾರ್ಗದ ಮೂಲಕ ಬೆಂಗಳೂರಿಗೆ ಹೋಗಬಹುದು. ಲಘು ವಾಹನಗಳಿಗೆ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.

ಎರಡೂ ಕಡೆಯಿಂದ ಯಾವುದೇ ಸಮಸ್ಯೆ ಆಗದಂತೆ ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.ಶಿರಾಡಿ ಘಾಟ್‌ ಪ್ರದೇಶದಲ್ಲಿ ಭಾರೀ ಮಳೆಯ ಕಾರಣದಿಂದ ಭೂಕುಸಿತ ಉಂಟಾಗಿತ್ತು. ಹೀಗಾಗಿ ಜು.14 ರಂದು ಹೆಚ್ಚಿನ ಪ್ರಮಾಣದ ಭೂಕುಸಿತ ಉಂಟಾಗಿ ಘನ ವಾಹನ ಸಂಚಾರ ಬಂದ್‌ ಆಗಿತ್ತು. ಅದಾದ ಬಳಿಕ ಮತ್ತೆ ಕುಸಿತ ಸಂಭವಿಸಿ ವಾಹನ ಸಂಚಾರ ಬಂದ್‌ ಆಗಿತ್ತು. ಇದೀಗ ಕೇವಲ ಲಘುವಾಹನಗಳಿಗೆ ಮಾತ್ರ ಪರ್ಯಾಯ ರಸ್ತೆಯ ಮೂಲಕ  ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

6 minutes ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

13 minutes ago

ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ  ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…

19 minutes ago

ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…

34 minutes ago

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

11 hours ago