Advertisement
ರಾಜ್ಯ

ಶಿರಾಡಿ ಘಾಟಿ | ಲಘು ವಾಹನಗಳ ಸಂಚಾರಕ್ಕೆ ಅವಕಾಶ | ಇಲ್ಲಿ ಈಗ ಏಕಮುಖ ಸಂಚಾರ | ವಾಹನ ಸವಾರರೇ ಗಮನಿಸಿ |

Share

ಶಿರಾಡಿ ಘಾಟಿಯ ಪ್ರದೇಶದ ದೋಣಿಗಲ್ ಸಮೀಪ ಭೂಕುಸಿತ ಉಂಟಾಗಿ  ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ ಆತಂಕಕ್ಕೆ ಒಳಗಾಗಿತ್ತು. ಬಳಿಕ ಭಾರೀ ಮಳೆಯ ಕಾರಣದಿಂದ ಮತ್ತೆ ಅಲ್ಲಲ್ಲಿ  ಕುಸಿತ ಉಂಟಾಗಿ  ಮಂಗಳೂರು-ಬೆಂಗಳೂರು ವಾಹನ ಸಂಚಾರ  ಬಂದ್ ಮಾಡಲಾಗಿತ್ತು. ಇದೀಗ ಶಿರಾಡಿ ಘಾಟ್‌ ಮೂಲಕ ಮತ್ತೆ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು ಪರ್ಯಾಯ ರಸ್ತೆ ಮೂಲಕ ಸಂಚರಿಸಲು ಹಾಸನ ಜಿಲ್ಲಾಧಿಕಾರಿ ಗಿರೀಶ್‌ ಆದೇಶ ಹೊರಡಿಸಿದ್ದಾರೆ.

Advertisement
Advertisement

ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್ ಆಂಬುಲೆನ್ಸ್ ಏಕಮುಖವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ. ಸಕಲೇಶಪುರ, ಆನೆ ಮಹಲ್, ಕ್ಯಾನಹಳಹಳ್ಳಿ, ಚಿನ್ನಹಳ್ಳಿ, ಕಡಗರಹಳ್ಳಿ ಮಾರ್ಗದಲ್ಲಿ ಮಾರನಹಳ್ಳಿ ತಲುಪಿ ಮಂಗಳೂರಿಗೆ ಹೋಗಲು ಅವಕಾಶ ನೀಡಲಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೋಗೋ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್ ಗಳು ಮಾರನಹಳ್ಳಿಯಿಂದ‌ ಕಾಡುಮನೆ, ಕಾರ್ಲೆ ಕೂಡಿಗೆ, ಆನೆಮಹಲ್ ಸಕಲೇಶಪುರ ಮಾರ್ಗದ ಮೂಲಕ ಬೆಂಗಳೂರಿಗೆ ಹೋಗಬಹುದು. ಲಘು ವಾಹನಗಳಿಗೆ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.

ಎರಡೂ ಕಡೆಯಿಂದ ಯಾವುದೇ ಸಮಸ್ಯೆ ಆಗದಂತೆ ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.ಶಿರಾಡಿ ಘಾಟ್‌ ಪ್ರದೇಶದಲ್ಲಿ ಭಾರೀ ಮಳೆಯ ಕಾರಣದಿಂದ ಭೂಕುಸಿತ ಉಂಟಾಗಿತ್ತು. ಹೀಗಾಗಿ ಜು.14 ರಂದು ಹೆಚ್ಚಿನ ಪ್ರಮಾಣದ ಭೂಕುಸಿತ ಉಂಟಾಗಿ ಘನ ವಾಹನ ಸಂಚಾರ ಬಂದ್‌ ಆಗಿತ್ತು. ಅದಾದ ಬಳಿಕ ಮತ್ತೆ ಕುಸಿತ ಸಂಭವಿಸಿ ವಾಹನ ಸಂಚಾರ ಬಂದ್‌ ಆಗಿತ್ತು. ಇದೀಗ ಕೇವಲ ಲಘುವಾಹನಗಳಿಗೆ ಮಾತ್ರ ಪರ್ಯಾಯ ರಸ್ತೆಯ ಮೂಲಕ  ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

19 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

20 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

20 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

20 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

20 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

20 hours ago