Advertisement
ರಾಜ್ಯ

ಶಿರಾಡಿ ಘಾಟಿ | ಲಘು ವಾಹನಗಳ ಸಂಚಾರಕ್ಕೆ ಅವಕಾಶ | ಇಲ್ಲಿ ಈಗ ಏಕಮುಖ ಸಂಚಾರ | ವಾಹನ ಸವಾರರೇ ಗಮನಿಸಿ |

Share

ಶಿರಾಡಿ ಘಾಟಿಯ ಪ್ರದೇಶದ ದೋಣಿಗಲ್ ಸಮೀಪ ಭೂಕುಸಿತ ಉಂಟಾಗಿ  ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ ಆತಂಕಕ್ಕೆ ಒಳಗಾಗಿತ್ತು. ಬಳಿಕ ಭಾರೀ ಮಳೆಯ ಕಾರಣದಿಂದ ಮತ್ತೆ ಅಲ್ಲಲ್ಲಿ  ಕುಸಿತ ಉಂಟಾಗಿ  ಮಂಗಳೂರು-ಬೆಂಗಳೂರು ವಾಹನ ಸಂಚಾರ  ಬಂದ್ ಮಾಡಲಾಗಿತ್ತು. ಇದೀಗ ಶಿರಾಡಿ ಘಾಟ್‌ ಮೂಲಕ ಮತ್ತೆ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು ಪರ್ಯಾಯ ರಸ್ತೆ ಮೂಲಕ ಸಂಚರಿಸಲು ಹಾಸನ ಜಿಲ್ಲಾಧಿಕಾರಿ ಗಿರೀಶ್‌ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್ ಆಂಬುಲೆನ್ಸ್ ಏಕಮುಖವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ. ಸಕಲೇಶಪುರ, ಆನೆ ಮಹಲ್, ಕ್ಯಾನಹಳಹಳ್ಳಿ, ಚಿನ್ನಹಳ್ಳಿ, ಕಡಗರಹಳ್ಳಿ ಮಾರ್ಗದಲ್ಲಿ ಮಾರನಹಳ್ಳಿ ತಲುಪಿ ಮಂಗಳೂರಿಗೆ ಹೋಗಲು ಅವಕಾಶ ನೀಡಲಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೋಗೋ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್ ಗಳು ಮಾರನಹಳ್ಳಿಯಿಂದ‌ ಕಾಡುಮನೆ, ಕಾರ್ಲೆ ಕೂಡಿಗೆ, ಆನೆಮಹಲ್ ಸಕಲೇಶಪುರ ಮಾರ್ಗದ ಮೂಲಕ ಬೆಂಗಳೂರಿಗೆ ಹೋಗಬಹುದು. ಲಘು ವಾಹನಗಳಿಗೆ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.

ಎರಡೂ ಕಡೆಯಿಂದ ಯಾವುದೇ ಸಮಸ್ಯೆ ಆಗದಂತೆ ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.ಶಿರಾಡಿ ಘಾಟ್‌ ಪ್ರದೇಶದಲ್ಲಿ ಭಾರೀ ಮಳೆಯ ಕಾರಣದಿಂದ ಭೂಕುಸಿತ ಉಂಟಾಗಿತ್ತು. ಹೀಗಾಗಿ ಜು.14 ರಂದು ಹೆಚ್ಚಿನ ಪ್ರಮಾಣದ ಭೂಕುಸಿತ ಉಂಟಾಗಿ ಘನ ವಾಹನ ಸಂಚಾರ ಬಂದ್‌ ಆಗಿತ್ತು. ಅದಾದ ಬಳಿಕ ಮತ್ತೆ ಕುಸಿತ ಸಂಭವಿಸಿ ವಾಹನ ಸಂಚಾರ ಬಂದ್‌ ಆಗಿತ್ತು. ಇದೀಗ ಕೇವಲ ಲಘುವಾಹನಗಳಿಗೆ ಮಾತ್ರ ಪರ್ಯಾಯ ರಸ್ತೆಯ ಮೂಲಕ  ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

4 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

6 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

13 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

21 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

22 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago