Advertisement
ರಾಜ್ಯ

ಶಿರಾಡಿ ಘಾಟಿ | ಲಘು ವಾಹನಗಳ ಸಂಚಾರಕ್ಕೆ ಅವಕಾಶ | ಇಲ್ಲಿ ಈಗ ಏಕಮುಖ ಸಂಚಾರ | ವಾಹನ ಸವಾರರೇ ಗಮನಿಸಿ |

Share

ಶಿರಾಡಿ ಘಾಟಿಯ ಪ್ರದೇಶದ ದೋಣಿಗಲ್ ಸಮೀಪ ಭೂಕುಸಿತ ಉಂಟಾಗಿ  ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ ಆತಂಕಕ್ಕೆ ಒಳಗಾಗಿತ್ತು. ಬಳಿಕ ಭಾರೀ ಮಳೆಯ ಕಾರಣದಿಂದ ಮತ್ತೆ ಅಲ್ಲಲ್ಲಿ  ಕುಸಿತ ಉಂಟಾಗಿ  ಮಂಗಳೂರು-ಬೆಂಗಳೂರು ವಾಹನ ಸಂಚಾರ  ಬಂದ್ ಮಾಡಲಾಗಿತ್ತು. ಇದೀಗ ಶಿರಾಡಿ ಘಾಟ್‌ ಮೂಲಕ ಮತ್ತೆ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು ಪರ್ಯಾಯ ರಸ್ತೆ ಮೂಲಕ ಸಂಚರಿಸಲು ಹಾಸನ ಜಿಲ್ಲಾಧಿಕಾರಿ ಗಿರೀಶ್‌ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್ ಆಂಬುಲೆನ್ಸ್ ಏಕಮುಖವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ. ಸಕಲೇಶಪುರ, ಆನೆ ಮಹಲ್, ಕ್ಯಾನಹಳಹಳ್ಳಿ, ಚಿನ್ನಹಳ್ಳಿ, ಕಡಗರಹಳ್ಳಿ ಮಾರ್ಗದಲ್ಲಿ ಮಾರನಹಳ್ಳಿ ತಲುಪಿ ಮಂಗಳೂರಿಗೆ ಹೋಗಲು ಅವಕಾಶ ನೀಡಲಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೋಗೋ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್ ಗಳು ಮಾರನಹಳ್ಳಿಯಿಂದ‌ ಕಾಡುಮನೆ, ಕಾರ್ಲೆ ಕೂಡಿಗೆ, ಆನೆಮಹಲ್ ಸಕಲೇಶಪುರ ಮಾರ್ಗದ ಮೂಲಕ ಬೆಂಗಳೂರಿಗೆ ಹೋಗಬಹುದು. ಲಘು ವಾಹನಗಳಿಗೆ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.

ಎರಡೂ ಕಡೆಯಿಂದ ಯಾವುದೇ ಸಮಸ್ಯೆ ಆಗದಂತೆ ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.ಶಿರಾಡಿ ಘಾಟ್‌ ಪ್ರದೇಶದಲ್ಲಿ ಭಾರೀ ಮಳೆಯ ಕಾರಣದಿಂದ ಭೂಕುಸಿತ ಉಂಟಾಗಿತ್ತು. ಹೀಗಾಗಿ ಜು.14 ರಂದು ಹೆಚ್ಚಿನ ಪ್ರಮಾಣದ ಭೂಕುಸಿತ ಉಂಟಾಗಿ ಘನ ವಾಹನ ಸಂಚಾರ ಬಂದ್‌ ಆಗಿತ್ತು. ಅದಾದ ಬಳಿಕ ಮತ್ತೆ ಕುಸಿತ ಸಂಭವಿಸಿ ವಾಹನ ಸಂಚಾರ ಬಂದ್‌ ಆಗಿತ್ತು. ಇದೀಗ ಕೇವಲ ಲಘುವಾಹನಗಳಿಗೆ ಮಾತ್ರ ಪರ್ಯಾಯ ರಸ್ತೆಯ ಮೂಲಕ  ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

8 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

9 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

10 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago