ಶಿರಾಡಿ ಘಾಟಿಯ ಪ್ರದೇಶದ ದೋಣಿಗಲ್ ಸಮೀಪ ಭೂಕುಸಿತ ಉಂಟಾಗಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ ಆತಂಕಕ್ಕೆ ಒಳಗಾಗಿತ್ತು. ಬಳಿಕ ಭಾರೀ ಮಳೆಯ ಕಾರಣದಿಂದ ಮತ್ತೆ ಅಲ್ಲಲ್ಲಿ ಕುಸಿತ ಉಂಟಾಗಿ ಮಂಗಳೂರು-ಬೆಂಗಳೂರು ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ಶಿರಾಡಿ ಘಾಟ್ ಮೂಲಕ ಮತ್ತೆ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು ಪರ್ಯಾಯ ರಸ್ತೆ ಮೂಲಕ ಸಂಚರಿಸಲು ಹಾಸನ ಜಿಲ್ಲಾಧಿಕಾರಿ ಗಿರೀಶ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್ ಆಂಬುಲೆನ್ಸ್ ಏಕಮುಖವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ. ಸಕಲೇಶಪುರ, ಆನೆ ಮಹಲ್, ಕ್ಯಾನಹಳಹಳ್ಳಿ, ಚಿನ್ನಹಳ್ಳಿ, ಕಡಗರಹಳ್ಳಿ ಮಾರ್ಗದಲ್ಲಿ ಮಾರನಹಳ್ಳಿ ತಲುಪಿ ಮಂಗಳೂರಿಗೆ ಹೋಗಲು ಅವಕಾಶ ನೀಡಲಾಗಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಹೋಗೋ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್ ಗಳು ಮಾರನಹಳ್ಳಿಯಿಂದ ಕಾಡುಮನೆ, ಕಾರ್ಲೆ ಕೂಡಿಗೆ, ಆನೆಮಹಲ್ ಸಕಲೇಶಪುರ ಮಾರ್ಗದ ಮೂಲಕ ಬೆಂಗಳೂರಿಗೆ ಹೋಗಬಹುದು. ಲಘು ವಾಹನಗಳಿಗೆ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.
ಎರಡೂ ಕಡೆಯಿಂದ ಯಾವುದೇ ಸಮಸ್ಯೆ ಆಗದಂತೆ ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.ಶಿರಾಡಿ ಘಾಟ್ ಪ್ರದೇಶದಲ್ಲಿ ಭಾರೀ ಮಳೆಯ ಕಾರಣದಿಂದ ಭೂಕುಸಿತ ಉಂಟಾಗಿತ್ತು. ಹೀಗಾಗಿ ಜು.14 ರಂದು ಹೆಚ್ಚಿನ ಪ್ರಮಾಣದ ಭೂಕುಸಿತ ಉಂಟಾಗಿ ಘನ ವಾಹನ ಸಂಚಾರ ಬಂದ್ ಆಗಿತ್ತು. ಅದಾದ ಬಳಿಕ ಮತ್ತೆ ಕುಸಿತ ಸಂಭವಿಸಿ ವಾಹನ ಸಂಚಾರ ಬಂದ್ ಆಗಿತ್ತು. ಇದೀಗ ಕೇವಲ ಲಘುವಾಹನಗಳಿಗೆ ಮಾತ್ರ ಪರ್ಯಾಯ ರಸ್ತೆಯ ಮೂಲಕ ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…