ಶಿರಾಡಿ ಘಾಟ್‌ ಸುರಂಗ ಮಾರ್ಗ | ಮತ್ತೆ ಸಮಗ್ರ ಯೋಜನಾ ವರದಿಗೆ ಜೀವ |

December 27, 2024
7:23 AM
ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.

ಮಂಗಳೂರು-ಬೆಂಗಳೂರು ಸಂಪರ್ಕಿಸುವ  ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.2022 ರಲ್ಲಿ ಈ ಯೋಜನೆ ಸಾಧ್ಯವಿಲ್ಲ ಎಂದು ಹೇಳಿದ್ದ ಸರ್ಕಾರವು ಈಗ ಮತ್ತೆ ಡಿಪಿಆರ್‌ ರಚಿಸಲು ಒಪ್ಪಿಗೆ ನೀಡಿದೆ.…..ಮುಂದೆ ಓದಿ….

ಶಿರಾಡಿ ಸುರಂಗ ಮಾರ್ಗಕ್ಕೆ ಸಂಬಂಧಿಸಿದಂತೆ ಕಳೆದ 10 ವರ್ಷಗಳಿಂದ ಚರ್ಚೆ ಇದೆ. ಈ ನಡುವೆ ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ ಹಾಗೂ ಇಲ್ಲಿನ ಮಣ್ಣಿನ ತರಗತಿ ಹಾಗೂ ಭೂಕುಸಿದಂತಹ ಕಾರಣಗಳಿಂದ ಈ ಯೋಜನೆ ಸಾಧ್ಯವಿಲ್ಲ ಎಂದು  2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಇದೀಗ, ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಕರ್ನಾಟಕ ಸರ್ಕಾರ  ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯ ಬೆನ್ನಲ್ಲೇ ಡಿಪಿಆರ್ ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.

ಈ ಯೋಜನೆಯ ಪ್ರಕಾರ ಶಿರಾಡಿಯ ಅಡ್ಡಹೊಳೆಯಿಂದ ಮಾರನಹಳ್ಳಿಯವರೆಗೆ ಸುರಂಗ ಮಾರ್ಗದ ಸುಮಾರು 30 ಕಿಮೀ ಉದ್ದದ ಯೋಜನೆ ಇದಾಗಿದೆ. ಇದರಲ್ಲಿ ಸುಮಾರು 4 ಕಿಮೀ ಸುರಂಗ ಮಾರ್ಗವು ಒಳಗೊಳ್ಳುತ್ತದೆ. ಆದರೆ ಶಿರಾಡಿ ಘಾಟಿಯು ಅರಣ್ಯದಿಂದ ಕೂಡಿದೆ ಮತ್ತು ಭೂಕುಸಿತದಂತಹ ಕಾರಣಗಳಿಂದ ಈ ಯೋಜನೆಗೆ ಸಾಕಷ್ಟು ಪರ ಹಾಗೂ ವಿರೋಧ ಚರ್ಚೆಯಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror