ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.2022 ರಲ್ಲಿ ಈ ಯೋಜನೆ ಸಾಧ್ಯವಿಲ್ಲ ಎಂದು ಹೇಳಿದ್ದ ಸರ್ಕಾರವು ಈಗ ಮತ್ತೆ ಡಿಪಿಆರ್ ರಚಿಸಲು ಒಪ್ಪಿಗೆ ನೀಡಿದೆ.…..ಮುಂದೆ ಓದಿ….
ಶಿರಾಡಿ ಸುರಂಗ ಮಾರ್ಗಕ್ಕೆ ಸಂಬಂಧಿಸಿದಂತೆ ಕಳೆದ 10 ವರ್ಷಗಳಿಂದ ಚರ್ಚೆ ಇದೆ. ಈ ನಡುವೆ ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ ಹಾಗೂ ಇಲ್ಲಿನ ಮಣ್ಣಿನ ತರಗತಿ ಹಾಗೂ ಭೂಕುಸಿದಂತಹ ಕಾರಣಗಳಿಂದ ಈ ಯೋಜನೆ ಸಾಧ್ಯವಿಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಇದೀಗ, ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯ ಬೆನ್ನಲ್ಲೇ ಡಿಪಿಆರ್ ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.
ಈ ಯೋಜನೆಯ ಪ್ರಕಾರ ಶಿರಾಡಿಯ ಅಡ್ಡಹೊಳೆಯಿಂದ ಮಾರನಹಳ್ಳಿಯವರೆಗೆ ಸುರಂಗ ಮಾರ್ಗದ ಸುಮಾರು 30 ಕಿಮೀ ಉದ್ದದ ಯೋಜನೆ ಇದಾಗಿದೆ. ಇದರಲ್ಲಿ ಸುಮಾರು 4 ಕಿಮೀ ಸುರಂಗ ಮಾರ್ಗವು ಒಳಗೊಳ್ಳುತ್ತದೆ. ಆದರೆ ಶಿರಾಡಿ ಘಾಟಿಯು ಅರಣ್ಯದಿಂದ ಕೂಡಿದೆ ಮತ್ತು ಭೂಕುಸಿತದಂತಹ ಕಾರಣಗಳಿಂದ ಈ ಯೋಜನೆಗೆ ಸಾಕಷ್ಟು ಪರ ಹಾಗೂ ವಿರೋಧ ಚರ್ಚೆಯಾಗಿತ್ತು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ. ಜೊತೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…
ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…
ದೆಹಲಿಯಲ್ಲಿ ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ…