MIRROR FOCUS

ಶಿರಾಡಿ ಘಾಟ್‌ ಸುರಂಗ ಮಾರ್ಗ | ಮತ್ತೆ ಸಮಗ್ರ ಯೋಜನಾ ವರದಿಗೆ ಜೀವ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು-ಬೆಂಗಳೂರು ಸಂಪರ್ಕಿಸುವ  ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.2022 ರಲ್ಲಿ ಈ ಯೋಜನೆ ಸಾಧ್ಯವಿಲ್ಲ ಎಂದು ಹೇಳಿದ್ದ ಸರ್ಕಾರವು ಈಗ ಮತ್ತೆ ಡಿಪಿಆರ್‌ ರಚಿಸಲು ಒಪ್ಪಿಗೆ ನೀಡಿದೆ.…..ಮುಂದೆ ಓದಿ….

Advertisement
Advertisement

ಶಿರಾಡಿ ಸುರಂಗ ಮಾರ್ಗಕ್ಕೆ ಸಂಬಂಧಿಸಿದಂತೆ ಕಳೆದ 10 ವರ್ಷಗಳಿಂದ ಚರ್ಚೆ ಇದೆ. ಈ ನಡುವೆ ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ ಹಾಗೂ ಇಲ್ಲಿನ ಮಣ್ಣಿನ ತರಗತಿ ಹಾಗೂ ಭೂಕುಸಿದಂತಹ ಕಾರಣಗಳಿಂದ ಈ ಯೋಜನೆ ಸಾಧ್ಯವಿಲ್ಲ ಎಂದು  2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಇದೀಗ, ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಕರ್ನಾಟಕ ಸರ್ಕಾರ  ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯ ಬೆನ್ನಲ್ಲೇ ಡಿಪಿಆರ್ ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.

ಈ ಯೋಜನೆಯ ಪ್ರಕಾರ ಶಿರಾಡಿಯ ಅಡ್ಡಹೊಳೆಯಿಂದ ಮಾರನಹಳ್ಳಿಯವರೆಗೆ ಸುರಂಗ ಮಾರ್ಗದ ಸುಮಾರು 30 ಕಿಮೀ ಉದ್ದದ ಯೋಜನೆ ಇದಾಗಿದೆ. ಇದರಲ್ಲಿ ಸುಮಾರು 4 ಕಿಮೀ ಸುರಂಗ ಮಾರ್ಗವು ಒಳಗೊಳ್ಳುತ್ತದೆ. ಆದರೆ ಶಿರಾಡಿ ಘಾಟಿಯು ಅರಣ್ಯದಿಂದ ಕೂಡಿದೆ ಮತ್ತು ಭೂಕುಸಿತದಂತಹ ಕಾರಣಗಳಿಂದ ಈ ಯೋಜನೆಗೆ ಸಾಕಷ್ಟು ಪರ ಹಾಗೂ ವಿರೋಧ ಚರ್ಚೆಯಾಗಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ.  ಜೊತೆಗೆ…

6 hours ago

ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ

ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…

12 hours ago

ಬದುಕು ಪುರಾಣ | ವಿಶ್ವದ ಮೊದಲ ಪತ್ರಕರ್ತ!

ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…

13 hours ago

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

ದೆಹಲಿಯಲ್ಲಿ  ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…

22 hours ago