MIRROR FOCUS

ಶಿರಾಡಿ ಘಾಟ್‌ ಸುರಂಗ ಮಾರ್ಗ | ಮತ್ತೆ ಸಮಗ್ರ ಯೋಜನಾ ವರದಿಗೆ ಜೀವ |

Share

ಮಂಗಳೂರು-ಬೆಂಗಳೂರು ಸಂಪರ್ಕಿಸುವ  ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.2022 ರಲ್ಲಿ ಈ ಯೋಜನೆ ಸಾಧ್ಯವಿಲ್ಲ ಎಂದು ಹೇಳಿದ್ದ ಸರ್ಕಾರವು ಈಗ ಮತ್ತೆ ಡಿಪಿಆರ್‌ ರಚಿಸಲು ಒಪ್ಪಿಗೆ ನೀಡಿದೆ.…..ಮುಂದೆ ಓದಿ….

Advertisement

ಶಿರಾಡಿ ಸುರಂಗ ಮಾರ್ಗಕ್ಕೆ ಸಂಬಂಧಿಸಿದಂತೆ ಕಳೆದ 10 ವರ್ಷಗಳಿಂದ ಚರ್ಚೆ ಇದೆ. ಈ ನಡುವೆ ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ ಹಾಗೂ ಇಲ್ಲಿನ ಮಣ್ಣಿನ ತರಗತಿ ಹಾಗೂ ಭೂಕುಸಿದಂತಹ ಕಾರಣಗಳಿಂದ ಈ ಯೋಜನೆ ಸಾಧ್ಯವಿಲ್ಲ ಎಂದು  2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಇದೀಗ, ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಕರ್ನಾಟಕ ಸರ್ಕಾರ  ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯ ಬೆನ್ನಲ್ಲೇ ಡಿಪಿಆರ್ ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.

ಈ ಯೋಜನೆಯ ಪ್ರಕಾರ ಶಿರಾಡಿಯ ಅಡ್ಡಹೊಳೆಯಿಂದ ಮಾರನಹಳ್ಳಿಯವರೆಗೆ ಸುರಂಗ ಮಾರ್ಗದ ಸುಮಾರು 30 ಕಿಮೀ ಉದ್ದದ ಯೋಜನೆ ಇದಾಗಿದೆ. ಇದರಲ್ಲಿ ಸುಮಾರು 4 ಕಿಮೀ ಸುರಂಗ ಮಾರ್ಗವು ಒಳಗೊಳ್ಳುತ್ತದೆ. ಆದರೆ ಶಿರಾಡಿ ಘಾಟಿಯು ಅರಣ್ಯದಿಂದ ಕೂಡಿದೆ ಮತ್ತು ಭೂಕುಸಿತದಂತಹ ಕಾರಣಗಳಿಂದ ಈ ಯೋಜನೆಗೆ ಸಾಕಷ್ಟು ಪರ ಹಾಗೂ ವಿರೋಧ ಚರ್ಚೆಯಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…

5 hours ago

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

6 hours ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

7 hours ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

7 hours ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

7 hours ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

7 hours ago