ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.2022 ರಲ್ಲಿ ಈ ಯೋಜನೆ ಸಾಧ್ಯವಿಲ್ಲ ಎಂದು ಹೇಳಿದ್ದ ಸರ್ಕಾರವು ಈಗ ಮತ್ತೆ ಡಿಪಿಆರ್ ರಚಿಸಲು ಒಪ್ಪಿಗೆ ನೀಡಿದೆ.…..ಮುಂದೆ ಓದಿ….
ಶಿರಾಡಿ ಸುರಂಗ ಮಾರ್ಗಕ್ಕೆ ಸಂಬಂಧಿಸಿದಂತೆ ಕಳೆದ 10 ವರ್ಷಗಳಿಂದ ಚರ್ಚೆ ಇದೆ. ಈ ನಡುವೆ ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ ಹಾಗೂ ಇಲ್ಲಿನ ಮಣ್ಣಿನ ತರಗತಿ ಹಾಗೂ ಭೂಕುಸಿದಂತಹ ಕಾರಣಗಳಿಂದ ಈ ಯೋಜನೆ ಸಾಧ್ಯವಿಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಇದೀಗ, ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯ ಬೆನ್ನಲ್ಲೇ ಡಿಪಿಆರ್ ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.
ಈ ಯೋಜನೆಯ ಪ್ರಕಾರ ಶಿರಾಡಿಯ ಅಡ್ಡಹೊಳೆಯಿಂದ ಮಾರನಹಳ್ಳಿಯವರೆಗೆ ಸುರಂಗ ಮಾರ್ಗದ ಸುಮಾರು 30 ಕಿಮೀ ಉದ್ದದ ಯೋಜನೆ ಇದಾಗಿದೆ. ಇದರಲ್ಲಿ ಸುಮಾರು 4 ಕಿಮೀ ಸುರಂಗ ಮಾರ್ಗವು ಒಳಗೊಳ್ಳುತ್ತದೆ. ಆದರೆ ಶಿರಾಡಿ ಘಾಟಿಯು ಅರಣ್ಯದಿಂದ ಕೂಡಿದೆ ಮತ್ತು ಭೂಕುಸಿತದಂತಹ ಕಾರಣಗಳಿಂದ ಈ ಯೋಜನೆಗೆ ಸಾಕಷ್ಟು ಪರ ಹಾಗೂ ವಿರೋಧ ಚರ್ಚೆಯಾಗಿತ್ತು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…